Sunday, June 29, 2025
spot_imgspot_img
spot_imgspot_img

ವಿಟ್ಲ: ಸರಕಾರಿ ಪ್ರೌಢಶಾಲೆಯಲ್ಲಿ ವಿವೇಕ ಶಾಲಾ ಕೊಠಡಿಗಳ ಶಿಲಾನ್ಯಾಸ ನೆರವೇರಿಸಿದ ಶಾಸಕ ಅಶೋಕ್ ಕುಮಾರ್ ರೈ

- Advertisement -
- Advertisement -

ವಿಟ್ಲ : ಸರಕಾರಿ ಪ್ರೌಢಶಾಲೆ (RMSA)ನಲ್ಲಿ ವಿವೇಕ ಶಾಲಾ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ನೆರವೇರಿಸಿದರು.

ರಾಜ್ಯದಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇರುವ ಸರ್ಕಾರಿ ಶಾಲೆಗೆ ಬೇಕಾದಂತಹ ಸವಲತ್ತುಗಳನ್ನು ಒದಗಿಸುವ ವ್ಯವಸ್ಥೆ ಮಾಡುವುದು ಶಾಸಕರ ಕರ್ತವ್ಯ. ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ದೊರೆತು ಉತ್ತಮ ವಿದ್ಯಾರ್ಥಿಗಳನ್ನು ಹೊರತರುವಂತಾಗಲಿ ಎಂದು ಈ ಸಂದರ್ಭದಲ್ಲಿ ಅವರು ಹಾರೈಸಿದರು.

ಶಾಲಾ ಗೌರವಾಧ್ಯಕ್ಷ ಸುಬ್ರಾಯ ಪೈ ಅವರು ಶಾಸಕರ ವತಿಯಿಂದ ಶಾಲೆಗೆ ಬಂದಂತಹ ವಿವಿಧ ಸವಲತ್ತುಗಳ ಬಗ್ಗೆ ತಿಳಿಸಿದರು.
ಬಂಟ್ವಾಳದ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರುಗಳಾದ ಶಾರದಾ ಮತ್ತು ರವಿಶಂಕರ ಶಾಸ್ತ್ರಿ ಇತರ ಸದಸ್ಯರು, ಪಟ್ಟಣ ಪಂಚಾಯಿತಿಯ ಸದಸ್ಯರಾದ ಗೋಪಿಕೃಷ್ಣ, ಅಶ್ರಫ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ರಮಾನಾಥ ವಿಟ್ಲ, ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯ‌ರ್‍ ನಾಗೇಶ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವಾರಿಜಾಕುಮಾರಿ, ನಿವೃತ್ತ ಮುಖ್ಯ ಶಿಕ್ಷಕಿ ಪುಷ್ಪಾ, ಇಂಜಿನಿಯರ್ ರಾಘವೇಂದ್ರ ಪೈ, ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು. ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಅನ್ನಪೂರ್ಣಾ ಸ್ವಾಗತಿಸಿ, ವಂದಿಸಿದರು.

- Advertisement -

Related news

error: Content is protected !!