Thursday, April 25, 2024
spot_imgspot_img
spot_imgspot_img

ವಿಟ್ಲ :ಸಹಕಾರಿ ಸಂಘದ ಕಟ್ಟಡದ ಶಟರ್ ಕಟ್ಟ್ ಮಾಡಿ ಕಳವಿಗೆ ಯತ್ನ: ಆರೋಪಿ ಟಿ.ಕೆ ಅಬ್ದುಲ್ ಸಲಾಂ ಬಂಧನ

- Advertisement -G L Acharya panikkar
- Advertisement -

ವಿಟ್ಲ ಪಡ್ನೂರು ಗ್ರಾಮದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡದ ಶಟರ್ ಅನ್ನು ಗ್ಯಾಸ್ ಕಟ್ಟರ್ ಬಳಸಿ ಮುರಿಯಲು ಯತ್ನಿಸಿ ಕಳವಿಗೆ ಪ್ರಯತ್ನಿಸಿದ ಒಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಟಿ.ಕೆ ಅಬ್ದುಲ್ ಸಲಾಂ (37) ಎಂದು ಗುರುತಿಸಲಾಗಿದೆ.

ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕರಾದ ನಾಗರಾಜ ಹೆಚ್ .ಇ. ರವರ ಮಾರ್ಗದರ್ಶನದಂತೆ, ವಿಟ್ಲ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸಂದೀಪ್ ಶೆಟ್ಟಿ ಹಾಗೂ ಸಿಬ್ಬಂದಿಗಳು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇನ್ನು ಆರೋಪಿಗಳು ಕೃತ್ಯಕ್ಕೆ ಬಳಸಿದ ವಾಹನ ಝೈಲೋ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಮುಖ್ಯ ಆರೋಪಿ, ಸೂತ್ರದಾರ ಅಬೂಬಕ್ಕರ್ ಸಿದ್ದೀಕ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

- Advertisement -

Related news

error: Content is protected !!