- Advertisement -
- Advertisement -
ವಿಟ್ಲ: ಕಬಕದಲ್ಲಿ ವೀರ ಸಾವರ್ಕರ್ ರವರಿಗೆ ಆದ ಅವಮಾನ ಖಂಡಿಸಿ ವಿಟ್ಲ ಸಂಘ ಪರಿವಾರಗಳಿಂದ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಸ್.ಡಿ.ಪಿ.ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯನ್ನು ಮಾಡಲಾಯಿತು.
ಈ ವೇಳೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಘಟಕದ ಇದರ ಅಧ್ಯಕ್ಷ ಕೃಷ್ಣಪ್ಪ, ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯದರ್ಶಿ ಚರಣ್, ಪುತ್ತೂರು ಮಂಡಲ ಅಧ್ಯಕ್ಷ ಹರಿಪ್ರಸಾದ್ ಯಾದವ್, ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ, ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ರಾಜೇಶ್, ವಿಟ್ಲ ಮಹಾ ಶಕ್ತಿ ಕೇಂದ್ರದ ಕಾರ್ಯದರ್ಶಿಗಳಾದ ದಯಾನಂದ, ಹರೀಶ್, ಜೀವನ್, ಲೋಕನಾಥ್, ವಿಟ್ಲ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಸುರೇಶ್ ಶಿವಾಜಿನಗರ, ಪುತ್ತೂರು ಗ್ರಾಮಾಂತರ ಯುವಮೋರ್ಚಾದ ಉಪಾಧ್ಯಕ್ಷ ಶರಣ್, ರಾಮ್ದಾಸ್ ಶೆಣೈ ಸೇರಿದಂತೆ ಮೊದಲಾದವರು ಜೊತೆಗಿದ್ದರು
- Advertisement -