ವಿಟ್ಲ: ಪುತ್ತೂರು ವಿಧಾನಸಭಾ ಕ್ಷೇತ್ರದ ಇಡ್ಕಿದು ಗ್ರಾಮದ ಕಂಬಳಬೆಟ್ಟು – ಸೂರ್ಯ ಸಂಪರ್ಕ ರಸ್ತೆ ಕಾಂಕ್ರೀಟ್ ಕಾಮಗಾರಿ ಅಭಿವೃದ್ಧಿಗೆ ರೂ.50ಲಕ್ಷ ಅನುದಾನ ಒದಗಿಸಿಕೊಟ್ಟು ಶಿಲಾನ್ಯಾಸ ಕಾರ್ಯಕ್ರಮವನ್ನ ಪುತ್ತೂರು ಶಾಸಕ ಸಂಜೀವ ಮಠಂದೂರು ನೆರವೇರಿಸಿದರು.
ಕಂಬಳಬೆಟ್ಟು – ಸೂರ್ಯ ಸಂಪರ್ಕ ರಸ್ತೆ ಕಾಂಕ್ರೀಟ್ ಕಾಮಗಾರಿ ಅಭಿವೃದ್ಧಿಗೆ ಹಲವು ಸಮಯದಿಂದ ಗ್ರಾಮಸ್ಥರ ಒಕ್ಕೊರಲ ಆಗ್ರಹವಾಗಿತ್ತು . ಸದ್ಯ ಶಾಸಕ ಸಂಜೀವ ಮಠಂದೂರು ಕಾಮಗಾರಿ ಅಭಿವೃದ್ಧಿಗೆ ರೂ.50ಲಕ್ಷ ಅನುದಾನ ಒದಗಿಸಿಕೊಟ್ಟು ಇಂದು ಶಿಲಾನ್ಯಾಸ ಕಾರ್ಯಕ್ರಮವನ್ನ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಜರಂಗದಳ ಮುಖಂಡ ಮುರಳಿಕೃಷ್ಣ ಹಸಂತಡ್ಕ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಹರಿಪ್ರಸಾದ್ ಯಾದವ್, ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಮೊಕ್ತೇಸರ ಸುರೇಶ್ ಕೆ.ಎಸ್ ಮುಕ್ಕುಡ, ಇಡ್ಕಿದು ಗ್ರಾಮ ಪಂಚಾಯತ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಇಡ್ಕಿದು ಗ್ರಾಮ ಪಂಚಾಯತ್ ಸದಸ್ಯರಾದ ತಿಲಕ್ ರಾಜ್ ಶೆಟ್ಟಿ, ಚಿದಾನಂದ ಪೆಲತ್ತಿಂಜ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ರಮೇಶ್ ಆಳ್ವ, ಜಗದೀಶ್ ದೇವಸ್ಯ, ಕೃಷ್ಣಪ್ಪ ಉರಿಮಜಲು, ತಿಮ್ಮಪ್ಪ ಸಪಲ್ಯ ದೇವಸ್ಯ. ಮತ್ತು ಗ್ರಾಮಸ್ಥರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.