- Advertisement -
- Advertisement -
ವಿಟ್ಲ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಅನ್ಯಕೋಮಿನ ಯುವಕನ ಕಿರುಕುಳ ಇದೆ ಎಂದು ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಡತನದಲ್ಲಿರುವ ಕುಟುಂಬಕ್ಕೆ ಹಿಂದೂ ಸಂಘಟನೆಗಳು ಭರವಸೆ ನೀಡುತ್ತಿದೆ. ಇಂದು ಹಿಂದೂ ಕಾರ್ಯಕರ್ತ ಶರಣ್ ಪಂಪ್ವೆಲ್ ಭೇಟಿ ನೀಡಿ ಘಟನೆಯ ವಿವರ ಮತ್ತು ಕುಟುಂಬಕ್ಕೆ ಭರವಸೆ ನೀಡಿದರು.
ನಂತರ ಪೊಲೀಸ್ ಠಾಣೆಗೆ ಆಗಮಿಸಿದ ಶರಣ್ ಪಂಪ್ವೆಲ್ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿದರು. ಈ ವೇಳೆ ಸಂಘಟನೆಯ ಪ್ರಮುಖರಾದ ಪದ್ಮನಾಭ ಕಟ್ಟೆ, ಕೃಷ್ಣಪ್ಪ, ದಯಾನಂದ ಶೆಟ್ಟಿ ಉಜಿರೆಮಾರು, ಚಂದ್ರಹಾಸ ಕನ್ಯಾನ ಸೇರಿದಂತೆ ಮೊದಲಾದವರು ಜೊತೆಗಿದ್ದರು.
- Advertisement -