Friday, March 29, 2024
spot_imgspot_img
spot_imgspot_img

ವಿಟ್ಲ ಹಾಗೂ ಬಂಟ್ವಾಳದಲ್ಲಿ ಅಕ್ರಮ ಗೋ ಸಾಗಾಟ; ನಾಲ್ವರು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಹಿಂ.ಜಾ.ವೇ ಕಾರ್ಯಕರ್ತರು

- Advertisement -G L Acharya panikkar
- Advertisement -

ವಿಟ್ಲ: ಅಕ್ರಮವಾಗಿ ವಧೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ ಮಾಡಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಬಂಟ್ವಾಳ ಹಾಗೂ ವಿಟ್ಲದ ಕನ್ಯಾನದಲ್ಲಿ ನಡೆದಿದೆ.

ಗೋಪಾಲ್, ರಫೀಜ್, ಮಹಮ್ಮದ್ ಹಾಗೂ ಮಸೂದ್ ಬಂಧಿತ ಆರೋಪಿಗಳು.

ಬಂಟ್ವಾಳದ ಕಲ್ಲಗುಡ್ಡೆಯಿಂದ ಅಮ್ಮುಂಜೆಗೆ ಸಾಗಿಸುತ್ತಿದ್ದ ವೇಳೆ ತೆಂಕಬೆಳ್ಳೂರು ಎಂಬಲ್ಲಿ ಜಾನುವಾರುಗಳನ್ನು ರಕ್ಷಣೆ ಮಾಡಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಆರೋಪಿಗಳಾದ ಗೋಪಾಲ್ ಹಾಗೂ ರಫೀಜ್ ಎಂಬವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇನ್ನು ವಿಟ್ಲದಲ್ಲಿಯೂ ದಾಳಿ ನಡೆಸಿದ ವಿಟ್ಲ ತಾಲೂಕು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಜಾನುವಾರುಗಳನ್ನು ರಕ್ಷಣೆ ಮಾಡಿ ಮಹಮ್ಮದ್ ಹಾಗೂ ಮಸೂದ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸ್ ವಶಕ್ಕೆ ಒಪ್ಪಿದ್ದಾರೆ.

ಆರೋಪಿಗಳು ಅಕ್ರಮವಾಗಿ ಜಾನವಾರುಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಈ ದಾಳಿಯನ್ನು ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

vtv vitla
- Advertisement -

Related news

error: Content is protected !!