Saturday, June 28, 2025
spot_imgspot_img
spot_imgspot_img

ವಿಟ್ಲ: ಹಾಡಹಗಲೇ ಮಹಿಳೆಯ ಸರ ಕಿತ್ತು ಪರಾರಿಯಾದ ಯುವಕ

- Advertisement -
- Advertisement -

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ರೈಲ್ವೇ ಬ್ರಿಡ್ಜ್ ಬಳಿ ಮಹಿಳೆಯ ಸರ ಕಿತ್ತು ಯುವಕನೋರ್ವ ಪರಾರಿಯಾದ ಘಟನೆ ನಡೆದಿದೆ.

ಮಹಿಳೆಯೊಬ್ಬರು ಪುತ್ತೂರಿನಿಂದ ಬಂದು ಮಿತ್ತೂರಿನಲ್ಲಿ ಬಸ್ಸಿನಿಂದು ಇಳಿದು ಕೋಲ್ಪೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬಂದ ಅಪರಿಚಿತ ವ್ಯಕ್ತಿ ಸರ ಎಳೆದುಕೊಂಡು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಬಿಳಿ ಆಕ್ಟೀವಾದಲ್ಲಿ ಬಂದ ಕಂದು ಬಣ್ಣದ ಟೀಶರ್ಟ್‌ ಧರಿಸಿದ ಯುವಕ ಸರ ಎಳೆದುಕೊಂಡು ಹೋಗಿ ರಾಷ್ಟ್ರೀಯ ಹೆದ್ದಾರಿ ಮೂಲಕ ಪರಾರಿಯಾಗಿದ್ದಾನೆ ಎಂದು ಮಹಿಳೆ ಆಪ್ತರಲ್ಲಿ ತಿಳಿಸಿದ್ದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!