Tuesday, April 16, 2024
spot_imgspot_img
spot_imgspot_img

ವಿಟ್ಲ: ಹಿಂದೂ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಪಂಚಾಯಿತ್ ಸಿಬ್ಬಂದಿಯನ್ನು ವಜಾಗೊಳಿಸುವಂತೆ ವಿ.ಹಿಂ.ಪ ಬಜರಂಗದಳ ಹಾಗೂ ಸಾರ್ವಜನಿಕರಿಂದ ಮನವಿ

- Advertisement -G L Acharya panikkar
- Advertisement -

ವಿಟ್ಲ: ಪುಣಚ ಗ್ರಾಮ ಪಂಚಾಯತ್ ಸಿಬ್ಬಂದಿ ಉಸ್ಮಾನ್ ಎಂಬಾತ ಪುಣಚ ಪಂಚಾಯತ್ ಕಛೇರಿಯ ಅವರಣದಲ್ಲಿ ಯುವತಿ ಒಬ್ಬಳಿಗೆ ಮಾನಭಂಗ ಯತ್ನ ಮಾಡಿ ಈಗಾಗಲೇ ಬಂಧಿತನಾಗಿದ್ದು ಆರೋಪಿ ಸಿಬ್ಬಂದಿಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣ ಸೇವೆಯಿಂದ ವಜಾಗೊಳಿಸಿ ಪಂಚಾಯತ್ ಕಛೇರಿಯಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣ ಮಾಡುವಂತೆ ಅಗ್ರಹಿಸಿ ವಿಶ್ವ ಹಿಂದು ಪರಿಷದ್ ಬಜರಂಗದಳ ಹಾಗೂ ಸಾರ್ವಜನಿಕರಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರ ಮೂಲಕ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಮುರಳೀಕೃಷ್ಣ ಹಸಂತಡ್ಕ, ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಶ್ರೀಧರ್ ತೆಂಕಿಲ, ಬಜರಂಗದಳ ಜಿಲ್ಲಾ ಸುರಕ್ಷಾ ಪ್ರಮುಖ್ ಜಯಂತ್ ಕುಂಜೂರುಪಂಜ ಹಾಗೂ ಕಾರ್ಯಕರ್ತರು,ಸಾರ್ವಜನಿಕರು ಉಪಸ್ಥಿತರಿದ್ದರು.

ವಿಟ್ಲ: ಹಿಂದೂ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಕಾಮುಕ ಉಸ್ಮಾನ್ ; ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು

- Advertisement -

Related news

error: Content is protected !!