- Advertisement -
- Advertisement -
ವಿಟ್ಲ: ಹಿಂದೂ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಹಿಂದೂ ಯುವ ವಾಹಿನಿಯ ವಿಟ್ಲ ತಾಲೂಕು ಸಂಚಾಲಕ ಅಕ್ಷಯ್ ರಜಪೂತ್ ಅವರಿಗೆ ವಿದೇಶದಿಂದ ಬೆದರಿಕೆ ಕರೆಯೊಂದು ಬಂದಿದ್ದು , ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲವು ದಿನಗಳ ಹಿಂದೆ ಪೆರ್ಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಟ್ಟೆಯ ಬಳಿ ಅನ್ಯಮತೀಯ ವ್ಯಕ್ತಿಯೊಬ್ಬರು ಮೀನು ವ್ಯಾಪಾರ ನಡೆಸುತ್ತಿದ್ದರು. ಕಟ್ಟೆಯನ್ನು ಅಪವಿತ್ರಗೊಳಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹಿಂದೂ ಜಾಗರಣಾ ವೇದಿಕೆಯ ಅಕ್ಷಯ್ ರಜಪೂತ್ ಅವರಿಗೆ ವಿದೇಶದಿಂದ ಬೆದರಿಕೆ ಕರೆಯೊಂದು ಬಂದಿದೆ. ಈ ಬೆದರಿಕೆ ಕರೆಯ ವಿರುದ್ಧ ವಿಟ್ಲ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ
- Advertisement -