- Advertisement -
- Advertisement -
ವಿಟ್ಲ: 9ನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಅಳಿಕೆ ಗ್ರಾಮದ ಚಂದಾಡಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿ ಅನ್ವಿತಾ ಹೆಗ್ಡೆ ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಗಳ ಪುತ್ರಿಯಾಗಿದ್ದು, ಮೃತ ವಿದ್ಯಾರ್ಥಿನಿ ವಿಠಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೯ನೇ ತರಗತಿಯ ವಿದ್ಯಾರ್ಥಿನಿ. ನಿನ್ನೆ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಇದ್ದ ಓರ್ವ ಮಗಳನ್ನು ಕಳೆದುಕೊಂಡ ಹೆತ್ತವರ ದುಃಖ ಮುಗಿಲುಮುಟ್ಟಿದೆ.
ಅನ್ವಿತಾ ಸಾವನ್ನಪ್ಪಿದ ಕಾರಣ ಶಾಲೆಗೆ ರಜೆ ನೀಡಲಾಗಿದ್ದು, ವಿಠಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಕಂಬನಿ ಮೀಡಿದಿದ್ದಾರೆ.
- Advertisement -