- Advertisement -
- Advertisement -



ವಿಟ್ಲ: ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿಭಾಗದಿಂದ ದ.ಕ ಜಿಲ್ಲೆಯಲ್ಲಿ SSLC ಪರೀಕ್ಷೆ 2022-23ರಲ್ಲಿ ದ. ಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಜೇಸಿ ಶಾಲೆಯ ವಿದ್ಯಾರ್ಥಿನಿ ಸಿಂಚನ ಬಿ .ಸಿ ಯವರು ವಿದ್ಯಾರ್ಥಿ ವೇತನವಾಗಿ ರೂ 1,00,000/-ಪಡೆದಿರುತ್ತಾರೆ. ಈ ನೆಲೆಯಲ್ಲಿ ಶಾಲೆಯ ಹೆಮ್ಮೆಯ ವಿದ್ಯಾರ್ಥಿನಿಗೆ ಕನ್ನಡ ರಾಜ್ಜ್ಯೋತ್ಸವ ಸಮಾರಂಭದಲ್ಲಿ ಗೌರವಿಸಿ ಪ್ರಶಂಸಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಎಲ್.ಎನ್ ಕೂಡೂರು ಈ ಪುರಸ್ಕಾರವು ಇತರರಿಗೆ ಮಾದರಿಯಾಗಲಿ ಎನ್ನುತ್ತಾ ಆಡಳಿತ ಮಂಡಳಿ ಪರವಾಗಿ ಅಭಿನಂದಿಸಿದರು. ಹಿರಿಯ ಮತ್ತು ನಿವೃತ್ತ ಶಿಕ್ಷಕ ನಾರಾಯಣ ಗೌಡ, ಜೇಸಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಜಯರಾಮ ರೈ, ಆಡಳಿತ ಅಧಿಕಾರಿ ರಾಧಾಕೃಷ್ಣ ಎ , ಉಪ ಪ್ರಾಂಶುಪಾಲೆ ಜ್ಯೋತಿ ಶೆಣೈ, ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
- Advertisement -