- Advertisement -
- Advertisement -
ವಿಟ್ಲ: ಯುದ್ಧ ಭೂಮಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಮರಳಿದ ವಿಟ್ಲದ ನೆತ್ರಕೆರೆ ನಿವಾಸಿ CRPF ಯೋಧ ದಯಾನಂದ ಅವರ ಮನೆಗೆ ಮಾಜಿ ಸಚಿವ ರಮಾನಾಥ ರೈ ಭೇಟಿ ನೀಡಿ ಶಾಲು ಹೊದಿಸಿ ಗೌರವಿಸಿದರು.
2001ರಲ್ಲಿ ಕರ್ತವ್ಯಕ್ಕೆ ಹಾಜರಾಗಿರುವ ಮೇಜರ್ ದಯಾನಂದ ನೆತ್ರೆಕೆರೆ ಅವರು ಒಟ್ಟು 20 ವರ್ಷಗಳ ಕಾಲ ದೇಶ ಸೇವೆಗೈದಿದ್ದಾರೆ. ಇದರ ನಡುವೆ 10 ವರ್ಷ ಕಾಶ್ಮೀರದಲ್ಲಿ ಕರ್ತವ್ಯದಲ್ಲಿದ್ದು, ಬಳಿಕ ಅಸ್ಸಾಂ ಮತ್ತು ನಾಗಲ್ಯಾಂಡ್ ಗಡಿಗಳಲ್ಲಿ ದೇಶ ಸೇವೆ ಸಲ್ಲಿಸಿದ್ದಾರೆ. ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಭಾರತೀಯ ಅರೆಸೇನಾ ಪಡೆಯಲ್ಲಿ ಕರ್ತವ್ಯ ಸಲ್ಲಿಸಿ, ಇದೀಗ ನಿವೃತ್ತ ಹೊಂದಿದ್ದ ಇವರು ತಾಯ್ನಾಡಿಗೆ ಮರಳಿದ್ದಾರೆ.
- Advertisement -