- Advertisement -
- Advertisement -
ವಿಟ್ಲ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ೬೨೫ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಧನ್ಯಶ್ರೀ ಮನೆಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಬಂಟ್ವಾಳ ಮತ್ತು ಪುತ್ತೂರು ತಾಲೂಕಿಗೆ ಹೆಮ್ಮೆ ತರುವ ವಿಷಯವಾಗಿದೆ. ಧನ್ಯಶ್ರೀ ಅವಳ ಸಾಧನೆಯ ಹಿಂದೆ ಹೆತ್ತವರ, ಅಧ್ಯಾಪಕರ, ಅವಳ ಸತತ ಶ್ರಮವಿದೆ ಎಂದು ಶ್ಲಾಘಿಸಿದರು. ಈ ವೇಳೆ ಪ್ರಮುಖರಾದ ಅರುಣ್ ಎಂ ವಿಟ್ಲ, ಹರಿಪ್ರಸಾದ್ ಯಾದವ್, ಮೋಹನದಾಸ ಉಕ್ಕುಡ, ರಾಮ್ದಾಸ್ ಶೆಣೈ ಸೇರಿದಂತೆ ಮೊದಲಾದವರು ಜೊತೆಗಿದ್ದರು.
ವಿಟ್ಲ: ವಿಠ್ಠಲ್ ಜೇಸಿಸ್ ಶಾಲೆಯ ಧನ್ಯಶ್ರೀ ರಾಜ್ಯಕ್ಕೆ ಪ್ರಥಮ
- Advertisement -