- Advertisement -
- Advertisement -
ಚಿಕ್ಕಮಗಳೂರು: ವಿದ್ಯಾರ್ಥಿನಿಯರಿಗೆ ದೈಹಿಕ ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರಭು ನಾಯಕ್ ಎಂದು ಗುರುತಿಸಲಾಗಿದೆ.
ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕ ಪ್ರಭು ನಾಯಕ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಬಂಧಿತ ಪ್ರಭು ನಾಯಕ್ ಮೇಲೆ 11 ಎಫ್ಐಆರ್ ದಾಖಲಾಗಿದೆ.
ಕಳೆದ ಕೆಲವು ದಿನಗಳಿಂದ ದೈಹಿಕ ಶಿಕ್ಷಕ ನಾಪತ್ತೆಯಾಗಿದ್ದ. ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಎಸ್ಪಿ ಸೂಚನೆ ನೀಡಿದ್ದು, ಎಸ್ಪಿ ಆದೇಶದ ಮೇರೆಗೆ ಪೊಲೀಸರು ಅಲರ್ಟ್ ಆಗಿದ್ದಾರೆ.
- Advertisement -