Friday, April 26, 2024
spot_imgspot_img
spot_imgspot_img

ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು; ದೂರು ದಾಖಲು

- Advertisement -G L Acharya panikkar
- Advertisement -

ಮಡಿಕೇರಿ: ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ವೀರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಐಮಂಗಲ ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿಗಳಾದ ಯೇಸುದಾಸ್ ಹಾಗೂ ತಾರ ದಂಪತಿ ಪುತ್ರ ರಕ್ಷಿತ್ ಎಂಬುವವರ ಪತ್ನಿ ಕಾವ್ಯ (23) ಮೃತಪಟ್ಟ ಮಹಿಳೆ.

ರಕ್ಷಿತ್ ಎಂದಿನಂತೆ ಕೆಲಸ ಮುಗಿಸಿ ಮನೆಗೆ ಬಂದಾಗ ಕಾವ್ಯ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ರಕ್ಷಿತ್ ಹಾಗೂ ಕಾವ್ಯ ಪ್ರೇಮ ವಿವಾಹವಾಗಿದ್ದು, ಮಕ್ಕಳಿಲ್ಲ ಎಂದು ತಿಳಿದು ಬಂದಿದೆ.

ಮೃತಳ ತಂದೆ, ಅರ್ಜಿ ಗ್ರಾ.ಪಂ ವ್ಯಾಪ್ತಿಯ ಕಿರುಮಕ್ಕಿ ಗ್ರಾಮದ ನಿವಾಸಿ ವಂಸತ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸು ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!