Sunday, June 29, 2025
spot_imgspot_img
spot_imgspot_img

ವಿವಿಯ ಪದವಿ ಫಲಿತಾಂಶ ವಿಳಂಬ; ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಿದ ಎಬಿವಿಪಿ

- Advertisement -
- Advertisement -

ಮಂಗಳೂರು: ಮಂಗಳೂರು ವಿವಿಯ ಪದವಿ ಫಲಿತಾಂಶಕ್ಕೆ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಪ್ರಶ್ನಿಸಿ ಎಬಿವಿಪಿ ಕಾರ್ಯಕರ್ತರು ಇಂದು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಈ ವೇಳೆ, ಪೊಲೀಸರು ಮತ್ತು ಎಬಿವಿಪಿ ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿದೆ.

ಮಂಗಳೂರು ವಿವಿಯ ಪರೀಕ್ಷಾ ಫಲಿತಾಂಶ ವಿಳಂಬದ ವಿರುದ್ಧ ಎಬಿವಿಪಿ ನೇತೃತ್ವದಲ್ಲಿ ಇಂದು ನಡೆದ ಪ್ರತಿಭಟನೆ ತಾರಕಕ್ಕೇರಿದ್ದು ಪೊಲೀಸರು, ಎಬಿವಿಪಿ ಕಾರ್ಯಕರ್ತರ ನಡುವೆ ನೂಕಾಟ, ತಳ್ಳಾಟ ನಡೆದಿದೆ. ಸುಮಾರು 500 ರಷ್ಟಿದ್ದ ಎಬಿವಿಪಿ ವಿದ್ಯಾರ್ಥಿಗಳು ಮಂಗಳೂರು ವಿ.ವಿ ಆಡಳಿತ ಸೌಧದ ಆವರಣಕ್ಕೆ ಬಂದಾಗ ಪೊಲೀಸರು ಅವರನ್ನ ತಡೆದಿದ್ದಾರೆ.

ಈ ವೇಳೆ ಎಬಿವಿಪಿ ಕಾರ್ಯಕರ್ತರು ಬ್ಯಾರಿಕೇಟ್‌ಗಳನ್ನು ತಳ್ಳಿ ಆಡಳಿತ ಸೌಧದೊಳಗೆ ನುಗ್ಗಿದ್ದು ಪೊಲೀಸರು ಅವರನ್ನ ತಡೆಯಲು ಯತ್ನಿಸಿದ್ದು ಈ ವೇಳೆ ತಳ್ಳಾಟ ಉಂಟಾಗಿದೆ.

- Advertisement -

Related news

error: Content is protected !!