ಫೆಡರೇಶನ್ ಆಫ್ ಹೋಟೆಲ್ ಆ್ಯಂಡ್ ರೆಸ್ಟೋರೆಂಟ್ ಅಸೋಸಿಯೇಶನ್ ರಾಷ್ಟ್ರವಾದಿ ಕಾಂಗ್ರೆಸ್ನ ಅಧ್ಯಕ್ಷ ಕಳತ್ತೂರು ವಿಶ್ವನಾಥ ಶೆಟ್ಟಿ ಅವರ ನೇತೃತ್ವದಲ್ಲಿ ರಾಜ್ಯ ಸಭಾ ಸದಸ್ಯ ಶರದ್ ಪವಾರ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿತು.
ವಿಶ್ವನಾಥ ಶೆಟ್ಟಿ ಅವರ ನೇತೃತ್ವದಲ್ಲಿ ಶರದ್ ಪಾವರ್ ಅವರನ್ನು ಫೆಡರೇಶನ್ ಆಫ್ ಹೋಟೆಲ್ ಆ್ಯಂಡ್ ರೆಸ್ಟೋರೆಂಟ್ ಅಸೋಸಿಯೇಶನ್ ಭೇಟಿ ಮಾಡಿಸಿದೆ. ಈ ವೇಳೆ ಮಾತನಾಡಿದ ಶರದ್ ಪವಾರ್ ಈ ಸಂಘವು ಮಹಾರಾಷ್ಟ್ರದ ಪ್ರತಿಯೊಂದು ಜಿಲ್ಲೆಯಲ್ಲೂ ಕಾರ್ಯ ನಿರ್ವಹಿಸುವಂತೆ ಆಗಬೇಕು. ಈ ಸಂಘಕ್ಕೆ ತನ್ನ ಸಂಪೂರ್ಣ ಬೆಂಬಲವಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಹೊಸ ವರ್ಷದಂದು ಸಹ ನಿಯಮ ಪಾಲನೆ ಮಾಡಬೇಕು. ಹೊಸ ವರ್ಷದಲ್ಲಿ ಹೊಸ ಯೋಜನೆ ಹಾಕಿ ಸಂಘವನ್ನು ಇನ್ನೂ ಎತ್ತರಕ್ಕೆ ಏರಿಸುವ ಎಂದು ಭರವಸೆ ನೀಡಿದರು.
ಈ ವೇಳೆ ಫೆಡರೇಶನ್ ಆಫ್ ಹೋಟೆಲ್ ಆ್ಯಂಡ್ ರೆಸ್ಟೋರೆಂಟ್ ಅಸೋಸಿಯೇಶನ್ ಇದರ ಅಧ್ಯಕ್ಷ ಶಂಕರ್ ಶೆಟ್ಟಿ, ಉಪಾಧ್ಯಕ್ಷ ಭರತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶ್ಯಾಮ್ ಶೆಟ್ಟಿ, ಕೋಶಾಧಿಕಾರಿ ದುರ್ಗಾಪ್ರಸಾದ್ ಸಿ. ಸಾಲಿಯಾನ್, ಜೊತೆ ಕಾರ್ಯದರ್ಶಿ ಬಾಬು ಶೆಟ್ಟಿ ಉಪಸ್ಥಿತರಿದ್ದರು. ಅಸೋಸಿಯೇಶನ್