Monday, April 29, 2024
spot_imgspot_img
spot_imgspot_img

ವಿಶ್ವ ಶಾಂತಿಗೆ ಭಾರತ ಬೆಂಬಲ; ಪ್ರಧಾನಿ ಮೋದಿ

- Advertisement -G L Acharya panikkar
- Advertisement -

ಬರ್ಲಿನ್: ಜರ್ಮನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ ಶಾಂತಿಯನ್ನು ಬಯಸುತ್ತದೆ ಎಂದು ಪುನರುಚ್ಚರಿಸಿದ್ದಾರೆ. ನಮ್ಮ ದೇಶ ಶಾಂತಿಯ ಪರವಾಗಿದೆ. ರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ವಿಜೇತರು ಯಾರೂ ಇರುವುದಿಲ್ಲ ಎಂಬುದನ್ನು ನಂಬುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಉಲ್ಲೇಖಿಸಿದ್ದಾರೆ.

vtv vitla
vtv vitla

ಜರ್ಮನ್ ಚಾನ್ಸಿಲರ್ ಜೊತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಉಕ್ರೇನ್ ನಲ್ಲಿ ಬಿಕ್ಕಟ್ಟು ಆರಂಭಗೊಂಡಾಗಿನಿಂದ ಭಾರತ ಶಾಂತಿ ಕಾಪಾಡುವಂತೆ ಮನವಿಮಾಡಿಕೊಂಡಿತ್ತು. ವಿವಾದ ಬಗೆಹರಿಸಲು ಶಾಂತಿ ಮಾತುಕತೆಯೊಂದೇ ಪರಿಹಾರವೆಂದು ಹೇಳಿತ್ತು. ಅಲ್ಲದೆ, ಯುದ್ಧ ಆರಂಭಗೊಂಡ ಬಳಿಕವೂ ಮಾತುಕತೆ ನಡೆಸುವಂತೆ ಮನವಿ ಮಾಡಿಕೊಂಡಿತ್ತು.

ಯುದ್ಧದಿಂದ ಯಾರಿಗೂ ಲಾಭವಾಗಲಾರದು. ಎಲ್ಲರೂ ನಷ್ಟ ಅನುಭವಿಸುತ್ತಾರೆ. ಈ ಹಿನ್ನೆಲೆಯಲ್ಲಿ ಭಾರತ ಶಾಂತಿಯ ಪರವಾಗಿದೆ ಎಂದು ಪ್ರಧಾನಿ ಪುನರುಚ್ಚರಿಸಿದ್ದಾರೆ. ಉಕ್ರೇನ್ ಬಿಕ್ಕಟ್ಟಿನಿಂದ ಉಂಟಾದ ವ್ಯತ್ಯಯಗಳಿಂದಾಗಿ ರಾಷ್ಟ್ರ ವ್ಯಾಪ್ತಿಯಲ್ಲಿ ಸಮಸ್ಯೆ ತಂದೊಡ್ಡಿದೆ. ತೈಲ ಬೆಲೆ ಏರಿಕೆಯ ಜೊತೆಗೆ ಆಹಾರ ಧಾನ್ಯ ಕೊರತೆಯಾಗುತ್ತಿದೆ. ಜಗತ್ತಿನೆಲ್ಲೆಡೆ ಜನ ಪರದಾಡುವಂತಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

- Advertisement -

Related news

error: Content is protected !!