Friday, May 17, 2024
spot_imgspot_img
spot_imgspot_img

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ ಶಸ್ತ್ರ ಪೂಜೆ; ಸಿಪಿಐ(ಎಂ) ಆಕ್ಷೇಪ

- Advertisement -G L Acharya panikkar
- Advertisement -

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷತ್ , ಭಜರಂಗದಳ ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ ಆಯುಧ ಪೂಜೆಯ ಹೆಸರಿನಲ್ಲಿ ಶಸ್ತ್ರ ಪೂಜೆ ಮಾಡುವ ಕಾರ್ಯಕ್ರಮವನ್ನು ಪೋಲಿಸ್ ಇಲಾಖೆ ಮತ್ತು ಜಿಲ್ಲಾಡಳಿತ ತಕ್ಷಣ ತಡೆಗಟ್ಟಬೇಕು ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ) – ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ಆಗ್ರಹಿಸಿದೆ.

RSS ಸ್ಥಾಪನೆಯಾದ ದಿನದಿಂದ ಭಾರತ ದೇಶ ಒಂದಲ್ಲ ಒಂದು ರೀತಿಯಲ್ಲಿ ಅಪಾಯಕಾರಿ ಸನ್ನಿವೇಶವನ್ನು ಎದುರಿಸುತ್ತಿದೆ. ಇದೀಗ ಮತ್ತೆ ಹಿಂದುತ್ವದ ಸಿದ್ಧಾಂತದ ಹೆಸರಿನಲ್ಲಿ ತನ್ನ ಭಯೋತ್ಪಾದಕತೆಯನ್ನು ವಿಸ್ತರಿಸುವ ಮೂಲಕ ದೇಶಕ್ಕೆ ಕಂಟಕವಾಗಿ ಪರಿಣಮಿಸುತ್ತಿದೆ. ದೇಶದಾದ್ಯಂತ ರಾಜಕೀಯ ಉದ್ದೇಶದಿಂದ ಬಾಂಬ್ ದಾಳಿ ನಡೆಸುತ್ತಿರುವ ಬಗ್ಗೆ ಇತ್ತೀಚಿಗೆ RSS ನಾಯಕನೊರ್ವ ಮಾನ್ಯ ನ್ಯಾಯಾಲಯಕ್ಕೆ ಅಫಿದಾವಿತ್ ಸಲ್ಲಿಸಿದ್ದರು. ಇದೀಗ ಅದೇ ಭಯೋತ್ಪಾದಕತೆಯ ಭಾಗವಾಗಿ ಆಯುಧ ಪೂಜೆ ಹೆಸರಿನಲ್ಲಿ ತಲಾವಾರು , ಖಡ್ಗ , ಭರ್ಜಿ , ಪಿಸ್ತೂಲ್ , ಬಂದೂಕು , ತ್ರಿಶೂಲವನ್ನು ಬಹಿರಂಗವಾಗಿ ಪ್ರದರ್ಶಿಸಿ , ಪೂಜೆ ಸಲ್ಲಿಸುವುದು ಅಪಾಯಕಾರಿ ಬೆಳವಣಿಗೆ ಎಂದು ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಶಸ್ತ್ರ ಪೂಜೆಯನ್ನು ತಡೆಯಲು ಪೋಲಿಸ್ ಇಲಾಖೆ ವಿಫಲವಾದರೆ ತಾಲೂಕಿನಲ್ಲಿ ನಡೆಯುವ ಮುಂದಿನ ಎಲ್ಲಾ ಅಹಿತಕರ ಘಟನೆಗಳಿಗೆ ಪೋಲಿಸ್ ಇಲಾಖೆ ಮತ್ತು ತಾಲೂಕು ಆಡಳಿತ ನೇರ ಹೊಣೆಯನ್ನು ಹೊರಬೇಕಾಗುತ್ತದೆ ಎಂದು ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ಕಾರ್ಯದರ್ಶಿ ಶಿವಕುಮಾರ್ ಎಸ್. ಎಂ , ಸದಸ್ಯರಾದ ವಸಂತ ನಡ , ಶೇಖರ್ ಲಾಯಿಲ ಆಗ್ರಹಿಸಿದ್ದಾರೆ. ಪೋಲಿಸ್ ಇಲಾಖೆ ಮತ್ತು ತಾಲೂಕು ಆಡಳಿತ ಸಂಘಪರಿವಾರದ ಭಯೋತ್ಪಾದಕ ಕೃತ್ಯಗಳನ್ನು ತಡೆಯದಿದ್ದರೆ ತಾಲೂಕಿನ ಪ್ರಗತಿಪರ ಸಂಘಟನೆಗಳ ಜೊತೆಗೂಡಿ ತಡೆಯುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗುತ್ತದೆ. ಮುಂದೆ ನಡೆಯುವ ಎಲ್ಲಾ ಅಹಿತಕರ ಘಟನೆಗಳಿಗೆ ನೇರ ಹೊಣೆಗಾರಿಕೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

astr
- Advertisement -

Related news

error: Content is protected !!