Friday, May 3, 2024
spot_imgspot_img
spot_imgspot_img

ವಿ.ಹಿ.ಪ.ಬಜರಂಗದಳ ವತಿಯಿಂದ ಬೃಹತ್ ಪ್ರತಿಭಟನಾ ಜಾಥ: ಒಡಿಯೂರು ಹಾಗೂ ಮಾಣಿಲ ಶ್ರೀಗಳು ಸೇರಿದಂತೆ ಹಲವು ಪ್ರಮುಖರು ಭಾಗಿ

- Advertisement -G L Acharya panikkar
- Advertisement -

ಅನುಮಾನಾಸ್ಪದವಾಗಿ ಬಾಡಿಗೆ ಮನೆಯಲ್ಲಿ ಮೃತಪಟ್ಟ ಬಾಲಕಿ ಸಾವಿಗೆ ನ್ಯಾಯ ಒದಗಿಸುವಂತೆ ಇಂದು ಕನ್ಯಾನ ಪೇಟೆಯಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕನ್ಯಾನ ವಲಯದ ವತಿಯಿಂದ ಕನ್ಯಾನ ರಾಘವೇಂದ್ರ ಭಜನಾ ಮಂದಿರದಿಂದ ಕನ್ಯಾನ ಪೇಟೆಯವರೆಗೆ ಬೃಹತ್ ಪ್ರತಿಭಟನಾ ಜಾಥ ನಡೆಯಿತು.

ಪ್ರತಿಭಟನಾ ಜಾಥದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕಣಿಯೂರು ಶ್ರೀ ಮಹಾಬಲ ಸ್ವಾಮೀಜಿ ಸೇರಿದಂತೆ, ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಕೃಷ್ಣಪ್ಪ ಕಲ್ಲಡ್ಕ, ವಿಶ್ವ ಹಿಂದೂ ಪರಿಷತ್ ವಿಟ್ಲ ಅಧ್ಯಕ್ಷ ಪದ್ಮನಾಭ ಕಟ್ಟೆ, ವಿಟ್ಲ ಬಜರಂಗದಳದ ಸಂಚಾಲಕ ಚಂದ್ರಹಾಸ ಕನ್ಯಾನ, ವಿಶ್ವ ಹಿಂದೂ ಪರಿಷತ್ ಮುಖಂಡ ಗೋವರ್ಧನ್ ಸೇರಿದಂತೆ ಹಲವು ಸಂಘಟನಾ ಪ್ರಮುಖರು, ಸಂಘಟನಾ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!