Wednesday, May 15, 2024
spot_imgspot_img
spot_imgspot_img

ವೃದ್ಧೆಯ ಬಳಿ ವಿಳಾಸ ಕೇಳುವ ನೆಪದಲ್ಲಿ ಚಿನ್ನದ ಸರ ಎಗರಿಸಿ ಪರಾರಿಯಾದ ಜೋಡಿ..!

- Advertisement -G L Acharya panikkar
- Advertisement -

ಪ್ರೇಮಿಗಳಿಬ್ಬರು ಮೇಕೆ ಮೇಯಿಸುತ್ತಿದ್ದ ವೃದ್ಧೆಯ ಬಳಿ ವಿಳಾಸ ಕೇಳುವ ನೆಪ ಮಾಡಿ ಚಿನ್ನದ ಸರ ಎಗರಿಸಿ ಪರಾರಿಯಾದ ಘಟನೆ ನಡೆದಿದೆ. ತೊಂಡಮುತ್ತೂರಿನ ವಯೋವೃದ್ಧೆ ಕಾಳಿಯಮ್ಮಳ್ ಎಂಬುವರು ಏಪ್ರಿಲ್ 28ರಂದು ನರಸೀಪುರಂ ರಸ್ತೆಯ ಅಗ್ನಿಶಾಮಕ ಠಾಣೆ ಬಳಿಯ ಹೊಲದಲ್ಲಿ ಮೇಕೆಗಳನ್ನು ಮೇಯುತ್ತಿದ್ದರು. ಅಷ್ಟರಲ್ಲಿ ಸ್ಕೂಟರ್‌ನಲ್ಲಿ ಬಂದ ಇಂಜಿನಿಯರಿಂಗ್​ ವಿದ್ಯಾರ್ಥಿಗಳಾದ ಪ್ರಶಾಂತ್ ಮತ್ತು ತೇಜಸ್ವಿನಿ ವಿಳಾಸ ಕೇಳುವ ನೆಪದಲ್ಲಿ ವೃದ್ಧೆಯನ್ನು ಮಾತನಾಡಿಸಿದ್ದಾರೆ.

ಯುವತಿ ಸ್ಕೂಟರ್‌ ನಡೆಸುತ್ತಿದ್ದರೆ, ಹಿಂಬದಿ ಕುಳಿತಿದ್ದ ಯುವಕ ಏಕಾಏಕಿ ಕಾಳಿಯಮ್ಮಳ್​ ಬಳಿ ಇದ್ದ 5.5 ಪವನ್ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ. ಈ ಬಗ್ಗೆ ದಾಖಲಾದ ದೂರಿನನ್ವಯ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಅಲ್ಲಿದ್ದ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ ಪೊಲೀಸರು ಕಳ್ಳರ ಜಾಡು ಹಿಡಿದು ಸೋಮಯಪಾಳ್ಯದ ಪ್ರಶಾಂತ್​ ಹಾಗೂ ಸುಂಗಮ್ ಪ್ರದೇಶದ ತೇಜಸ್ವಿನಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿದ್ದರು. ಈ ವೇಳೆ ಇಬ್ಬರೂ ತಪ್ಪೊಪ್ಪಿಕೊಂಡಿದ್ದಾರೆ.

ಬಂಧಿತ ಇಬ್ಬರೂ ಪೇರೂರು ಪಚ್ಚಪಾಳ್ಯಂನಲ್ಲಿರುವ ಖಾಸಗಿ ಕಾಲೇಜಿನಲ್ಲಿ 3ನೇ ವರ್ಷದ ಬಿಟೆಕ್ ವ್ಯಾಸಂಗ ಮಾಡುತ್ತಿದ್ದಾರೆ. ಜೊತೆಗೆ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಅಲ್ಲದೇ, ಪ್ರಶಾಂತ್​ ಆನ್‌ಲೈನ್ ಬೆಟ್ಟಿಂಗ್​ನಲ್ಲಿ ಅಪಾರ ಹಣವನ್ನು ಕಳೆದುಕೊಂಡಿದ್ದರು ಎನ್ನಲಾಗಿದೆ.

ಇಷ್ಟೇ ಅಲ್ಲ, ಪ್ರಶಾಂಶ್​ನ​ ಮನೆಯಲ್ಲಿ ಈ ಹಿಂದೆ 30 ಪವನ್ ಚಿನ್ನಾಭರಣ ಕಳೆದು ಹೋಗಿತ್ತು ಎಂದು ಆತನ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಈ ಚಿನ್ನಾಭರಣವನ್ನು ಇದೇ ಪ್ರಶಾಂತ್​ ಕದ್ದಿರುವುದು ಸಹ ವಿಚಾರಣೆ ಬೆಳಕಿಗೆ ಬಂದಿದೆ. ಆನ್‌ಲೈನ್ ಬೆಟ್ಟಿಂಗ್​ನಲ್ಲಿ ಹಣ ಕಳೆದುಕೊಂಡ ಕಾರಣ ತಮ್ಮ ಖರ್ಚಿಗಾಗಿ ಮತ್ತು ಸಾಲ ತೀರಿಸಲು ಇಬ್ಬರೂ ಕಳ್ಳತನದಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!