Thursday, May 2, 2024
spot_imgspot_img
spot_imgspot_img

ಶಕುಂತಳಾ ಶೆಟ್ಟಿ ಅವರು “ಈ ಬಾರಿ ಚುನಾವಣೆಯಲ್ಲಿ ಅಭ್ಯರ್ಥಿ ಸ್ಥಾನ ನನಗೆ ನೀಡುವುದಾಗಿ ಮಹಾಲಿಂಗೇಶ್ವರ ದೇವರಲ್ಲಿ ಪ್ರಮಾಣ ಮಾಡಿ ಹೇಳಿದ್ದಾರೆ”; ಕಾವು ಹೇಮನಾಥ ಶೆಟ್ಟಿ

- Advertisement -G L Acharya panikkar
- Advertisement -

ಪುತ್ತೂರು: ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿ ಸ್ಥಾನ ನಿನಗೇ ಎಂದು ಶಕುಂತಳಾ ಶೆಟ್ಟಿ ಮಹಾಲಿಂಗೇಶ್ವರ ದೇವರಲ್ಲಿ ಪ್ರಮಾಣ ಮಾಡಿ ಹೇಳಿದ್ದಾರೆ’ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿ ಕಾವು ಹೇಮನಾಥ ಶೆಟ್ಟಿ ಹೇಳಿದ್ದಾರೆ.

ಈ ಬಗ್ಗೆ ಪುತ್ತೂರಿನಲ್ಲಿ ಮಾತಾಡಿದ ಅವರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿಗಾಗಿ ನಾನು ಹಲವು ಬಾರಿ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದೇನೆ. ಈ ಬಾರಿ ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ ನನ್ನ ಹೆಸರೇ ಮುಂದಿದೆ, ಈ ಬಾರಿ ಪಕ್ಷ ನನ್ನನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪರಿಗಣಿಸಲಿದೆ, ಕಳೆದ ಚುನಾವಣೆಯಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಯವರಿಗೆ ಅಭ್ಯರ್ಥಿ ಸ್ಥಾನ ಬಿಟ್ಟು ಕೊಟ್ಟಿದ್ದೇನೆ. ಇದರಿಂದಾಗಿ ಈ ಬಾರಿ ಅವರು ನನಗೆ ವಿರೋಧ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ವಿಧಾನ ಸಭಾ ಚುನಾವಣಾ ಬೀಸಿ ಎಲ್ಲಾ ರಾಜಕೀಯ ವ್ಯಕ್ತಿಗಳನ್ನು, ಸ್ಥಾನ ಆಕಾಂಕ್ಷಿಗಳನ್ನು ತಟ್ಟುತ್ತಲೇ ಇದೆ. ಚುನಾವಣೆ ಘೋಷಣೆ ಮೊದಲೇ ಪುತ್ತೂರಿನಲ್ಲಿ ಅಭ್ಯರ್ಥಿತನಕ್ಕಾಗಿ ಪೈಪೋಟಿ ಆರಂಭವಾಗಿದೆ. ಕಾಂಗ್ರೇಸ್ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ೧೦ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದೆ. ಕಾವು ಹೇಮನಾಥ ಶೆಟ್ಟಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ದಿವ್ಯ ಪ್ರಭಾ ಗೌಡ, ಎಂ.ಬಿ.ವಿಶ್ವನಾಥ ರೈ, ಭರತ್ ಮುಂಡೋಡಿ, ಸತೀಶ್ ಕೆಡಿಂಜೆ ಮೊದಲಾದವರು ೨ ಲಕ್ಷ ನೀಡಿ ಅಭ್ಯ ರ್ಥಿತನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

- Advertisement -

Related news

error: Content is protected !!