- Advertisement -
- Advertisement -
ನವದೆಹಲಿ: ಶಬರಿಮಲೆ ಯಾತ್ರಿಗಳಿಗೆ ತೆರಳಲು ಅನುಕೂಲವಾಗುವ ನಿಟ್ಟಿನಲ್ಲಿ ಕೊಚ್ಚಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಕೇಂದ್ರ ತೆರೆಯಲಾಗಿದೆ.
ತಿರುವಾಂಕೂರು ದೇವಸ್ವಂ ಮಂಡಳಿ ಪರವಾಗಿ ಧನಲಕ್ಷ್ಮೀ ಬ್ಯಾಂಕ್ ಈ ಕೇಂದ್ರವನ್ನು ನಿರ್ವಹಿಸಲಿದೆ. ನೆಯ್ಯಭಿಷೇಕಂ, ಅರವಣ ಮತ್ತು ಅಯ್ಯಪ್ಪ ಪ್ರಸಾದಗಳಿಗೆ ಈ ಕೇಂದ್ರದಿಂದಲೇ ಕೂಪನ್ಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ. ಕೇರಳ ದೇವಸ್ವಂ ಮಂಡಳಿ ಅಧ್ಯಕ್ಷ ಕೆ.ಅನಂತಗೋಪನ್ ಅವರು ವಿಮಾನ ನಿಲ್ದಾಣದ ಡೊಮೆಸ್ಟಿಕ್ ಟರ್ಮಿನಲ್ ಆವರಣದಲ್ಲಿ ಕೇಂದ್ರವನ್ನು ಉದ್ಘಾಟಿಸಿದ್ದಾರೆ.
ಪ್ರವಾಹ ಮತ್ತು ಭಾರೀ ಮಳೆಯಂತಹ ಪರಿಸ್ಥಿತಿಗಳಿಂದಾಗಿ ಅಯ್ಯಪ್ಪ ಯಾತ್ರಾರ್ಥಿಗಳಿಗೆ ಗರಿಷ್ಠ ಸೌಲಭ್ಯಗಳನ್ನು ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಇತ್ತೀಚೆಗಷ್ಟೇ ಯಾತ್ರಾರ್ಥಿಗಳಿಗೆ ಗರಿಷ್ಠ ಸೌಲಭ್ಯಗಳನ್ನು ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಹಿನ್ನೆಲೆಯಲ್ಲಿ ಅಯ್ಯಪ್ಪ ಯಾತ್ರಿಕರಿಗೆ ಅನುಕೂಲವಾಗಲೆಂದು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಬರಿಮಲೆ ಹಬ್ ಅನ್ನು ನಿರ್ಮಿಸಲಾಗಿದೆ.
- Advertisement -