- Advertisement -
- Advertisement -
ಮಡಿಕೇರಿ: 3ನೇ ತರಗತಿಯ ಬಾಲಕನ ಮೇಲೆ ಶಾಲಾ ಆಡಳಿತ ಮಂಡಳಿಯ ಸದಸ್ಯ ದೊಣ್ಣೆಯಿಂದ ಹಲ್ಲೆ ನಡೆಸಿರುವ ಅಮಾನುಷ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಬಾಲಕನನ್ನು ಬೆಂಚ್ ಮೇಲೆ ಮಲಗಿಸಿ ದೊಣ್ಣೆಯಿಂದ ಮನಬಂದಂತೆ ಹಲ್ಲೆ ಮಾಡಲಾಗಿದೆ.
ಶಾಲಾ ಆಡಳಿತ ಮಂಡಳಿ ಸದಸ್ಯ ಕಿಶೋರ್ ಬೆಂಚಿನ ಮೇಲೆ ಬಾಲಕನನ್ನು ಮಲಗಿಸಿ ದೊಣ್ಣೆಯಿಂದ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ. ದೊಣ್ಣೆ ಪೆಟ್ಟು ತಿಂದ ಬಾಲಕ ಅಸ್ವಸ್ಥಗೊಂಡಿದ್ದು ಬಾಲಕನಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಸಂಬಂಧ ಕಿಶೋರ್ ವರ್ತನೆಗೆ ಪೋಷಕರು ಆಕ್ರೋಶ ಹೊರ ಹಾಕಿದ್ದು ಕಿಶೋರ್ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ.
- Advertisement -