Thursday, April 25, 2024
spot_imgspot_img
spot_imgspot_img

ಶಾಲಾ ಪ್ರವಾಸ ಹೊರಟ ಬಸ್‌ ಅಪಘಾತ; ವಿದ್ಯಾರ್ಥಿಗಳು ಸೇರಿ 10ಜನ ಗಂಭೀರ

- Advertisement -G L Acharya panikkar
- Advertisement -
vtv vitla

ಬೇಲೂರು ತಾಲೂಕಿನ ಬಳ್ಳೂರು-ಕೋನೆರಲು ಬಳಿ ಶಾಲಾ ವಿದ್ಯಾರ್ಥಿಗಳಿದ್ದ ಬಸ್ ಅಪಘಾತವಾಗಿದೆ. ತಡರಾತ್ರಿ 2:45ರ ಸುಮಾರಿಗೆ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಸ್‌ ಡಿಕ್ಕಿ ಹೊಡೆದಿದೆ. ಪರಿಣಾಮ ಚಾಲಕ, ನಿರ್ವಾಹಕ, ಶಾಲೆಯ ಪ್ರಾಂಶುಪಾಲರು, ಆರು ವಿದ್ಯಾರ್ಥಿಗಳು ಸೇರಿದಂತೆ ಹತ್ತು ಜನರು ಗಂಭೀರ ಗಾಯಗೊಂಡಿದ್ದಾರೆ.

ಮೈಸೂರು ಮಾನಸ ಗಂಗೋತ್ರಿ ಪ್ರೌಢಶಾಲಾ ವಿದ್ಯಾರ್ಥಿಗಳು ಹೊರನಾಡಿಗೆ ಪ್ರವಾಸ ಹೊರಟಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಬಸ್‌ನಲ್ಲಿ ವಿದ್ಯಾರ್ಥಿಗಳು ಸೇರಿ ಒಟ್ಟು 40 ಜನರು ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳಿಗೆ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಉಳಿದ ವಿದ್ಯಾರ್ಥಿಗಳಿಗೆ ಲಾಡ್ಜ್‌ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!