- Advertisement -
- Advertisement -
ತುಮಕೂರು: ಶಾಲಾ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆ ಜಿಲ್ಲೆಯ ಪಾವಗಡ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನಾದ ಸಿಎಂ ಮಲ್ಲಿಕಾರ್ಜುನನ್ನು ಅಮಾನತುಗೊಳಿಸಲಾಗಿದೆ.
ಅನುಚಿತ ಅಸಭ್ಯ ವರ್ತನೆ ಆರೋಪದ ಹಿನ್ನೆಲೆ ಅಮಾನತು ಮಾಡಿ ಬಿಇಒ ಆದೇಶ ಹೊರಡಿಸಿದ್ದಾರೆ. ಮುಖ್ಯ ಶಿಕ್ಷಕ ಸಿಎಂ ಮಲ್ಲಿಕಾರ್ಜುನ ಶಾಲಾ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ. ಅಲ್ಲದೇ ಶಾಲಾ ಸಿಬ್ಬಂದಿಯೊಂದಿಗೆ ಗೌರವವಾಗಿ ನಡೆದುಕೊಳ್ಳಲ್ಲ ಎಂಬ ಆರೋಪ ಕೇಳಿಬಂದಿತ್ತು. ಆರೋಪ ಸಾಭೀತಾದ ಹಿನ್ನೆಲೆ ಅಮಾನತು ಮಾಡಲಾಗಿದೆ.
- Advertisement -