Sunday, May 5, 2024
spot_imgspot_img
spot_imgspot_img

ಶಾಲೆ ಮುಗಿಸಿಕೊಂಡು ಬಂದ ಬಾಲಕನ ಜೀವ ಕಸಿದುಕೊಂಡ ಜೋಕಾಲಿ..!

- Advertisement -G L Acharya panikkar
- Advertisement -
vtv vitla

ಶಾಲೆ ಮುಗಿಸಿಕೊಂಡು ಮನೆಗೆ ಬಂದ 9 ವರ್ಷದ ಬಾಲಕನೊಬ್ಬ ಸೀರೆಯ ಜೋಕಾಲಿಯಲ್ಲಿ ಆಟವಾಡಲು ಹೋಗಿ ದುರಂತ ಅಂತ್ಯಕಂಡ ಘಟನೆ ಮಂಡ್ಯ ಕಿಕ್ಕೇರಿ ಸಮೀಪದ ಬೇವಿನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಸಂಭವಿಸಿದೆ.

ಬೇವಿನಹಳ್ಳಿ ಕೊಪ್ಪಲು ಗ್ರಾಮದ ಶ್ರೀನಿವಾಸ ಅವರ ಪುತ್ರ ಸಮರ್ಥ್​(9) ಮೃತ ಬಾಲಕ.

ಗುರುವಾರ ಸಂಜೆ ಶಾಲೆ ಮುಗಿಸಿಕೊಂಡು ಮನೆಗೆ ಸಮರ್ಥ್ ಬಂದಿದ್ದ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಜೋಕಾಲಿ ಆಟವಾಡಬೇಕು ಅನ್ನಿಸಿ, ಅಮ್ಮನ ಸೀರೆ ತೆಗೆದುಕೊಂಡು ಈತನೇ ಜೋಲಿ ಕಟ್ಟಿದ್ದಾನೆ. ಅದೇ ಇವನ ಪಾಲಿಗೆ ಉರುಳಾಗಿ ಪ್ರಾಣ ತೆಗೆದಿದೆ.

ಜೋಲಿ ಕಟ್ಟಿ ಅದರೊಳಗೆ ಕುಳಿತು ಆಟವಾಡಲು ಸಮರ್ಥ್​ ಹೋಗಿದ್ದಾನೆ. ಈ ವೇಳೆ ಜೋಕಾಲಿಯ ಬಟ್ಟೆ ಸುರುಳಿ ಸುತ್ತಿಕೊಂಡ ಪರಿಣಾಮ ಉಸಿರುಗಟ್ಟಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

- Advertisement -

Related news

error: Content is protected !!