- Advertisement -
- Advertisement -
ತುಮಕೂರು: ತುರುವೇಕೆರೆ ಶಾಸಕ ಮಸಾಲೆ ಜಯರಾಮ್ ಅವರ ಮಗ ತೇಜ್ ಜಯರಾಮ್ ಅವರ ಮೇಲೆ ದುಷ್ಕರ್ಮಿಗಳು ತುಮಕೂರು ತಾಲ್ಲೂಕಿನ ಹೆಬ್ಬೂರು ಬಳಿ ದಾಳಿ ಮಾಡಿ ಹತ್ಯೆ ಮಾಡಲು ಯತ್ನ ನಡೆಸಿದ್ದಾರೆ.
ತೇಜ್ ಜಯರಾಮ ಮೇಲೆ ಹಲ್ಲೆ ಮಾಡುತ್ತಲೇ ಅಲ್ಲಿಂದ ತಪ್ಪಿಸಿಕೊಂಡು ಗುಬ್ಬಿ ತಾಲೂಕಿನ ನೆಟ್ಟಿಕೆರೆ ಕ್ರಾಸ್ ಬಳಿ ಶಾಸಕ ಮಸಾಲೆ ಜಯರಾಮ್ ಅವರ ಮಗ ತೇಜ್ ಬರುತ್ತಲೇ ಅಲ್ಲಿ ಕೆಲವರು ಅವರ ಕಪಾಳಕ್ಕೆ ಹೊಡೆದು ಮಚ್ಚಿ ನಿಂದ ಹಲ್ಲೆ ಮಾಡಲು ಮುಂದಾದಾಗ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಹೋಗಿದ್ದಾರೆ.
ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರು, ಲಾಂಗ್, ಮಚ್ಚು, ಕಾರದಪುಡಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
- Advertisement -