ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ ಹೈಕಮಾಂಡ್ ಸೂಚಿಸಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ನಿನ್ನೆ ತಡರಾತ್ರಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಜೊತೆ ಮಾತುಕತೆಯ ಬಳಿಕ ಮಾಧ್ಯ ಮಗಳೊಂದಿಗೆ ಮಾತನಾಡಿದ ಅವರು, ನಾಲ್ಕು ದಶಕಗಳ ಕಾಲ ಪಕ್ಷವನ್ನು ಕಟ್ಟಿದ್ದ ನನಗೆ ತಿಂಗಳ ಹಿಂದೆ ಹೇಳಿದ್ದ ರೆ ಚುನಾವಣಾ ನಿವೃತ್ತಿಯಾಗುತ್ತಿದ್ದೆ . ಇಂದು ಭೇಟಿ ನೀಡಿದ ಧರ್ಮೇಂದ್ರ ಪ್ರದಾನ್ ಸಹಿತ ಹಿರಿಯ ಮುಖಂಡರು ನಿಮ್ಮ ಕುಟುಂಬಸ್ಥರಿಗೆ ಟಿಕೆಟ್ ನೀಡುತ್ತೇವೆ ಅಥವಾ ಪಕ್ಷದಲ್ಲಿ ಉನ್ನತ ಸ್ಥಾನ ನೀಡುತ್ತೇವೆ ಎಂದಿದ್ದರು. ಆಗ ನಾನು ನಮ್ಮ ಕುಟುಂಬಸ್ಥರು ಯಾರೂ ನಿಲ್ಲುವುದಿಲ್ಲ. ಟಿಕೆಟ್ ಕೊಡುವುದಿದ್ದರೆ ನನಗೆ ಕೊಡಿ.
ಜಗದೀಶ್ ಶೆಟ್ಟರ್ಗೆ ಯಾಕೆ ಟಿಕೆಟ್ ನೀಡುತ್ತಿಲ್ಲ ಎಂದು ಪ್ರ ಶ್ನಿಸಿದ್ದೇನೆ. ನನ್ನ ಮೇಲೆ ಯಾವುದೇ ಆರೋಪವಿಲ್ಲ, ನನ್ನ ಮೇಲೆ ಯಾವುದೇ ಕೇಸುಗಳಿಲ್ಲ. ನಾನೇನು ರೌಡಿಶೀಟರ್ ಅಲ್ಲ. ನನ್ನ ಯಾವುದೇ ಸಿ.ಡಿಗಳಿಲ್ಲ . ಆಂತರಿಕ ಚುನಾವಣೆಯಲ್ಲಿ ನನಗೆ ಬಹುಮತ ಸಿಕ್ಕಿದೆ. ಹಾಕಿದ್ದರೂ ನನಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಎಂದು ಧರ್ಮೇಂದ್ರ ಪ್ರದಾನ್ಗೆ ಪ್ರಶ್ನಿಸಿದ್ದೇನೆ. ಅದಕ್ಕೆ ಅವರ ಬಳಿ ಉತ್ತರವಿಲ್ಲ.
ಇಂದು ಬೆಳಗ್ಗೆ ಶಿರಸಿಗೆ ತೆರಳಿ ಸ್ಪೀಕರ್ಗೆ ರಾಜೀನಾಮೆ ಸಲ್ಲಿಸುತ್ತೇನೆ. ಜೊತೆಗೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಕ್ಕೂ ರಾಜೀನಾಮೆ ನೀಡಲಿದ್ದೇನೆ ಎಂದು ಅತ್ಯಂತ ಭಾವುಕರಾಗಿ ಹೇಳಿದರು. ಮುಂದಿನ ನಿರ್ಧಾರದ ಬಗ್ಗೆ ಇಂದು ಪ್ರಮುಖ ಹಿತೈಷಿಗಳೊಂದಿಗೆ ಮಾತನಾಡಿ ನಿರ್ಧಾರ ಕೈಗೊಳ್ಳಲಿದ್ದೇನೆ ಎಂದರು.