Thursday, July 30, 2026
spot_imgspot_img
spot_imgspot_img

ಶಿರಾಡಿ ಘಾಟ್ ಬಳಿ​ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ; ಬದಲಿ ಮಾರ್ಗದಲ್ಲಿ ವಾಹನ ಸಂಚಾರ!

- Advertisement -
- Advertisement -
driving

ಸಕಲೇಶಪುರ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್​ವೊಂದು ಪಲ್ಟಿಯಾದ ಘಟನೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಗುರುವಾರ ಮುಂಜಾನೆ ಈ ಘಟನೆ ನಡೆದಿದೆ.

ಮಂಗಳೂರಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್​ವೊಂದು ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಉರುಳಿ ಬಿದ್ದಿದೆ. ಪರಿಣಾಮ ಅನಿಲ ಸೋರಿಕೆಯಾಗುತ್ತಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಿರಾಡಿ ಘಾಟ್​ನಲ್ಲಿ ಕೆಲ ಗಂಟೆಗಳ ಕಾಲ ಸಂಪೂರ್ಣ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು.

ಬಳಿಕ ಪೊಲೀಸರು ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಅನುವು ಮಾಡಿಕೊಟ್ಟಿದ್ದಾರೆ. ಭಾರತ್ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಇಂಜಿನ್ ಒಳಗೆ ಸಿಲುಕಿದ್ದ ಚಾಲಕನನ್ನು ಕ್ರೇನ್ ಬಳಸಿ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ.

- Advertisement -

Related news

error: Content is protected !!