Saturday, June 28, 2025
spot_imgspot_img
spot_imgspot_img

ಶಿವಮೊಗ್ಗ : ಡಾ. ವಿಶ್ವಸಂತೋಷ ಭಾರತಿ ಶ್ರೀಗಳ ಸಾನಿಧ್ಯದಲ್ಲಿ ಮಕರ ಸಂಕ್ರಾಂತಿ ಮಹೋತ್ಸವ ಮತ್ತು ಶ್ರೀಗಳ ಪೀಠಾರೋಹಣದ ವರ್ಧಂತ್ಯೋತ್ಸವ ಸಮಾರಂಭ

- Advertisement -
- Advertisement -

ಶಿವಮೊಗ್ಗ : ಶ್ರೀ ಅಯ್ಯಪ್ಪ ಸ್ವಾಮಿ ಧಾರ್ಮಿಕ ದತ್ತಿ(ರಿ.) ಬೆಜ್ಜವಳ್ಳಿ ತೀರ್ಥಳ್ಳಿ ತಾಲೂಕು ಶಿವಮೊಗ್ಗ ಜಿಲ್ಲೆಯ, ದೇವಳದ ಕುಟುಂಬಸ್ಥರು, ಭಗವದ್ಭಕ್ತರು, ಗ್ರಾಮಸ್ಥರು ಮತ್ತು ಆಯುರಾಶ್ರಮದ ಸರ್ವ ಸದಸ್ಯರಿಂದ, ಪರಮ ಪೂಜ್ಯ ವಿದ್ಯಾ ವಾಚಸ್ಪತಿ ಶ್ರೀ ಡಾ. ವಿಶ್ವಸಂತೋಷ ಭಾರತಿ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಜ. 14 ರಂದು ಮಕರ ಸಂಕ್ರಾಂತಿ ಮಹೋತ್ಸವ ಮತ್ತು ಶ್ರೀಗಳ ಪೀಠಾರೋಹಣದ ವರ್ಧಂತ್ಯೋತ್ಸವ ಸಮಾರಂಭ ನಡೆಯಿತು.

ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ, ಮಾದರ ಚೆನ್ನಯ್ಯ ಗುರುಪೀಠ, ಚಿತ್ರದುರ್ಗ ಕಾಯಕವಾಗಿ ಡಾಕ್ಟರ್ ಶ್ರೀ ಶಾಂತವೀರ ಮಹಾಸ್ವಾಮೀಜಿ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಹೊಸದುರ್ಗ ಇವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.

ಗೃಹ ಸಚಿವ ಅರಗ ಜ್ಞಾನೇಂದ್ರ, ಪ್ರವಾಸೋದ್ಯಮ ಹಾಗೂ ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಕೇಂದ್ರ ಸಚಿವ ಶ್ರೀಪಾದ ನಾಯ್ಕ , ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷ ಬಿ. ಗುಣರಂಜನ್ ಶೆಟ್ಟಿ , ಕರ್ನಾಟಕ ಸರ್ಕಾರದ ಕರಕುಶಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶ್ರೀ ಹರಿಹರ ಪೀಠ ಪ್ರಶಸ್ತಿ ಪುರಸ್ಕೃತರಾದ ಪ್ರೊಫೆಸರ್ ನಂಜರಾಜ ಅರಸ್, ಚಂದ್ರಕಾಂತ್, ಪ್ರದೀಪ್ ಕುಮಾರ್ ರೈ ಉಪಸ್ಥಿತರಿದ್ದರು.

- Advertisement -

Related news

error: Content is protected !!