Wednesday, May 1, 2024
spot_imgspot_img
spot_imgspot_img

ಶಿವಮೊಗ್ಗ: ನಿಷೇಧಾಜ್ಞೆಯ ಮಧ್ಯೆಯೂ ಮತ್ತೊಂದು ಯುವಕನ ಮೇಲೆ ಹಲ್ಲೆ

- Advertisement -G L Acharya panikkar
- Advertisement -

ಶಿವಮೊಗ್ಗ: ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಿದ್ದರೂ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಭದ್ರಾವತಿ ನೆಹರು ನಗರದಲ್ಲಿ ಡಿಚ್ಚಿ ಅಲಿಯಾಸ್‌ ಮುಬಾರಕ್‌ಎಂಬಾತನಿಗೂ ಸುನೀಲ್ ಗೂ ಗಲಾಟೆ ನಡೆದಿದ್ದು, ಈ ವೇಳೆ ಸುನೀಲ್ ಮೇಲೆ ಹಲ್ಲೆ ನಡೆಸಲಾಗಿದೆ. ಚಾಕುವಿನಿಂದ ಇರಿಯಲು ಯತ್ನಿಸಲಾಗಿದೆ. ಆದರೆ, ಸುನೀಲ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಇಬ್ಬರ ನಡುವಿನ ಹಳೆಯ ವೈಮನಸ್ಯಕ್ಕೆ ನಡೆದಿದ್ದು ಎಂದು ಹೇಳಲಾಗಿದ್ದರೂ, ಸೂಕ್ಷ್ಮ ಸಮಯದ ವೇಳೆ ಇಂತಹ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಿವಮೊಗ್ಗಕ್ಕೆ ಆರ್​ಎಪಿ ತುಕಡಿ ಆಗಮಿಸಿದ್ದು, ಎಡಿಜಿಪಿ ಅಲೋಕ್​ ಕುಮಾರ್​ ನೇತೃತ್ವದಲ್ಲಿ ಬಂದೋಬಸ್ತ್​ ಮಾಡಲಾಗಿದೆ. ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತರುವ ಕೆಲಸ ಆಗ್ತಿದೆ. ಶಿವಮೊಗ್ಗದ ಘಟನೆ ಹಿನ್ನೆಲೆಯಲ್ಲಿ ನಗರದಲ್ಲೂ ಸಹ ನಿನ್ನೆಯಿಂದಲೇ ಸೆಕ್ಷನ್ ಜಾರಿಗೊಳಿಸಲಾಗಿದ್ದು, ನಗರದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

- Advertisement -

Related news

error: Content is protected !!