- Advertisement -
- Advertisement -
ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ರಸ್ತೆ ಕೊಚ್ಚಿ ಹೋದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೇರಳೆಕೊಡಿಗೆ ಬಳಿ ಹೆದ್ದಾರಿ ರಸ್ತೆ ಕೊಚ್ಚಿ ಹೋಗಿದೆ.
ನೇರಳೆಕೊಡಿಗೆಯಲ್ಲಿ ಸುಮಾರು 100 ಅಡಿಯಷ್ಟು ರಸ್ತೆ ಕೊಚ್ಚಿ ಹೋಗಿದ್ದು, ಶೃಂಗೇರಿ-ಆಗುಂಬೆ ಮಾರ್ಗದ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಕಡಿತಗೊಂಡಿದೆ. ಈ ಮಾರ್ಗದ ಬದಲಿಯಾಗಿ ಶೃಂಗೇರಿ- ಕಾವಡಿ- ಹೊಳೆಕೊಪ್ಪ ಅಥವಾ ಶೃಂಗೇರಿ- ಕೆಲ್ಲಾರ್- ಬೇಗಾರ್ ರಸ್ತೆಯಲ್ಲಿ ಸಂಚರಿಸಲು ಸೂಚಿಸಲಾಗಿದೆ.
- Advertisement -