Thursday, May 2, 2024
spot_imgspot_img
spot_imgspot_img

ಶ್ರದ್ದಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮಿನ್ ಪೂನಾವಾಲಾಗೆ 14 ದಿನಗಳ ನ್ಯಾಯಾಂಗ ಬಂಧನ

- Advertisement -G L Acharya panikkar
- Advertisement -

ನವದೆಹಲಿ: ಶ್ರದ್ದಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮಿನ್ ಪೂನಾವಾಲಾಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ವೀಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಿ ಬಳಿಕ 14 ದಿನಗಳನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ನಾರ್ಕೋ ಪರೀಕ್ಷೆಯ ಮೊದಲು ಆತನನ್ನು ದೆಹಲಿ ಪೊಲೀಸರು ಅಂಬೇಡ್ಕರ್‍ ಆಸ್ಪತ್ರೆಗೆ ಕರೆದೊಯ್ದಿದ್ದರು. ಇದೀಗ ಆತನನ್ನು ತಿಹಾರ್ ಜೈಲಿಗೆ ಕಳುಹಿಸಲಾಗುತ್ತಿದೆ.

ದೆಹಲಿಯಲ್ಲಿ ತನ್ನ ಲಿವ್ ಇನ್ ಸಂಗಾತಿ ಶ್ರದ್ದಾ ವಾಕರ್‌ ಎಂಬಾಕೆಯನ್ನು ಹತ್ಯೆಗೈದು ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಅರಣ್ಯ ಪ್ರದೇಶದಲ್ಲಿ ಎಸೆದಿದ್ದ ಆರೋಪಿ ಅಫ್ತಾಬ್‌ನ ಕೃತ್ಯಕ್ಕೆ ಇಡೀ ದೇಶವೇ ಬೆಚ್ಚಿ ಬಿದ್ದಿತ್ತು. ಕೆಲ ತಿಂಗಳ ಹಿಂದೆ ನಡೆದ ಈ ಘಟನೆ ಇತ್ತೀಚೆಗಷ್ಟೇ ಬೆಳಕಿಗೆ ಬಂದು ಆರೋಪಿಯನ್ನು ಬಂಧಿಸಲಾಗಿತ್ತು.

- Advertisement -

Related news

error: Content is protected !!