Sunday, May 5, 2024
spot_imgspot_img
spot_imgspot_img

ಶ್ರದ್ಧಾ ವಾಕರ್‌ ಕೊಲೆಯಂತೆಯೇ ಮತ್ತೊಂದು ಆಘಾತಕಾರಿ ಕೃತ್ಯ ; ತಂದೆಯನ್ನು ಹತ್ಯೆಗೈದು ಅಂಗಾಂಗಳನ್ನು ಬೋರ್‌ವೆಲ್‌ಗೆ ಹಾಕಿದ ಪುತ್ರ..!

- Advertisement -G L Acharya panikkar
- Advertisement -

ಹೆತ್ತ ತಂದೆಯನ್ನು ಭೀಕರವಾಗಿ ಹತ್ಯೆಗೈದು ಅಂಗಾಂಗಳನ್ನು ಬೋರ್ವೆಲ್‌ಗೆ ಹಾಕಿದ ಘಟನೆ ರಾಜ್ಯದಲ್ಲಿಯೇ ನಡೆದಿದೆ. ಈ ಹಿಂದೆ ದೆಹಲಿಯಲ್ಲಿ ಪ್ರಿಯತಮೆಯನ್ನು ಹತ್ಯೆ ಮಾಡಿ ಮೃತದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಘಟನೆ ಮಾಸುವ ಮೊದಲೇ ರಾಜ್ಯದಲ್ಲಿ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆ ಮುಧೋಳ ತಾಲೂಕಿನಲ್ಲಿ ನಡೆದಿದೆ.

ತಂದೆಯನ್ನೇ ಹತ್ಯೆ ಮಾಡಿದ ಪುತ್ರ ಅಂಗಾಂಗಗಳನ್ನು ಜಂಜರಕೊಪ್ಪದ ಜಮೀನು ಒಂದರ ನಿರುಪಯುಕ್ತ ಬೋರ್ವೆಲ್ ನಲ್ಲಿ ಹಾಕಿದ್ದಾನೆ. 54 ವರ್ಷದ ಪರಶುರಾಮ ಕುಳಲಿ ಕೊಲೆಯಾದ ವ್ಯಕ್ತಿ. ಅವರ ಪುತ್ರ ವಿಠ್ಠಲ್(20) ಕೊಲೆ ಆರೋಪಿಯಾಗಿದ್ದಾನೆ.

ಮೃತರ ಪತ್ನಿ ಸರಸ್ವತಿ ದೂರು ನೀಡಿದ್ದಾರೆ. ಸಿಪಿಐ ಅಯ್ಯನಗೌಡ ಪಾಟೀಲ, ಎಸ್‌ಐ ಸಂಗಮೇಶ ಹೊಸಮನಿ, ಕ್ರೈಂ ಪಿಎಸ್‌ಐ ಕೆ.ಬಿ. ಮಾಂಗ ಅವರ ನೇತೃತ್ವದಲ್ಲಿ ತನಿಖೆ ನಡೆಸಿದಾಗ ಕೊಲೆ ರಹಸ್ಯ ಬೆಳಕಿಗೆ ಬಂದಿದೆ. ಪರಶುರಾಮ ಕುಡಿದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಕಾರಣಕ್ಕೆ ವಿಠ್ಠಲ್ ಕೊಲೆ ಮಾಡಿ ನಿರುಪಯುಕ್ತ ಬೋರ್ವೆಲ್ ನಲ್ಲಿ ಅಂಗಾಂಗಗಳನ್ನು ಹಾಕಿದ್ದಾನೆ ಎನ್ನುವುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.

- Advertisement -

Related news

error: Content is protected !!