Tuesday, May 21, 2024
spot_imgspot_img
spot_imgspot_img

ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

- Advertisement -G L Acharya panikkar
- Advertisement -

ಹಾಸನ : ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ(73) ಅವರು ವಿಧಿವಶರಾಗಿದ್ದಾರೆ.

ಸ್ವಾಮೀಜಿಯವರು ಕಳೆದ 4 ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿದ್ದು ಶ್ರವಣಬೆಳಗೊಳದ ಮಠದಲ್ಲಿಯೇ ಅವರಿಗೆ ಶುಶ್ರೂಷೆ ಮಾಡಲಾಗುತ್ತಿತ್ತು. ಇನ್ನು ಇಂದು ಬೆಳಗ್ಗೆ ಭಂಡಾರ ಭವನದಲ್ಲಿ ಬಿಪಿ, ಶುಗರ್ ಏರುಪೇರಿನಿಂದ ಅಸ್ವಸ್ಥಗೊಂಡು ಸ್ವಾಮೀಜಿ ಕೆಳಗೆ ಬಿದ್ದಿದ್ದು ತಕ್ಷಣ ಅವರನ್ನು ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಅಂಬುಲೆನ್ಸ್‌ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಅಪಾರ ಭಕ್ತರು ಆಗಮಿಸಲಿದ್ದು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

- Advertisement -

Related news

error: Content is protected !!