Friday, May 3, 2024
spot_imgspot_img
spot_imgspot_img

ಶ್ರೀನಗರದಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಮತ್ತೋರ್ವ ಉಗ್ರ ಹತ

- Advertisement -G L Acharya panikkar
- Advertisement -

ಶ್ರೀನಗರ: ಶ್ರೀನಗರದಲ್ಲಿ ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ನಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾ ಪ್ರದೇಶದಲ್ಲಿ ಮಂಗಳವಾರ ಎನ್ ಕೌಂಟರ್ ನಡೆದಿದೆ

ಎನ್ ಕೌಂಟರ್ ಕುರಿತು ಮಾಹಿತಿ ನೀಡಿರುವ ಐಜಿಪಿ ವಿಜಯ್ ಕುಮಾರ್, ಸಾವನ್ನಪ್ಪಿರುವ ಉಗ್ರನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ ಎಂದು ತಿಳಿಸಿದ್ದಾರೆ.

vtv vitla
vtv vitla

ಆವಂತಿಪೋರಾ ಗ್ರಾಮವೊಂದರಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಜಂಟಿ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಅಲ್ಲಿ ಅಡಗಿದ್ದ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡು ಹಾರಿಸಿದಾಗ ಇದಕ್ಕೆ ಪ್ರತಿಯಾಗಿ ನಡೆಸಿದ ಗುಂಡಿನ ದಾಳಿಯಲ್ಲಿ ಉಗ್ರ ಸಾವನ್ನಪ್ಪಿದ್ದಾನೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ಇನ್ನೂ ಕೆಲವು ಉಗ್ರರು ಈ ಪ್ರದೇಶದಲ್ಲಿ ಅಡಗಿಕೊಂಡಿರುವ ಶಂಕೆ ಇದ್ದು, ಸೇನೆ, ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಅರೆಸೇನಾ ಪಡೆ ಜಂಟಿಯಾಗಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರಿಸಿರುವುದಾಗಿ ಅವರು ವಿವರಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!