Sunday, May 19, 2024
spot_imgspot_img
spot_imgspot_img

ಶ್ರೀರಾಮನ ಶೋಭಯಾತ್ರೆ ಮೇಲೆ ಕಲ್ಲು ತೂರಾಟ –  ಶಂಕಿತರ ಬಂಧನ

- Advertisement -G L Acharya panikkar
- Advertisement -

ಶ್ರೀರಾಮ ನವಮಿ ಅಂಗವಾಗಿ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಅದ್ಧೂರಿಯಾಗಿ ನಡೆದ ಹಿಂದೂ ಶೋಭಾಯಾತ್ರೆ ಹಿಂಸಾಚಾರಕ್ಕೆ ತಿರುಗಿದ ಪ್ರಸಂಗ ಕಳೆದ ರಾತ್ರಿ ನಡೆದಿದ್ದು ಘರ್ಷಣೆ, ಕಲ್ಲು ತೂರಾಟಕ್ಕೆ ಕಾರಣವಾದ 6 ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 

ತಡರಾತ್ರಿವರೆಗೂ ಮೊಬೈಲ್, ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ಮಾಡಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರ ತಲಾಶ್ ಮುಂದುವರಿದಿದೆ. ಘಟನೆಯ ಬಳಿಕ ಇದೀಗ ಕೋಲಾರ ಜಿಲ್ಲೆ ಮುಳಬಾಗಿಲು ಸಹಜ‌ ಸ್ಥಿತಿಗೆ ಮರಳುತ್ತಿದೆ. ಪಟ್ಟಣದಲ್ಲಿ ಕಿಡಿಗೇಡಿಗಳು ನಿನ್ನೆ ರಾತ್ರಿ ಕಲ್ಲು ತೂರಾಟ ನಡೆಸಿದ್ದರು. ಕಾರುಗಳು, ಅಂಗಡಿಗಳು, ಸವಾರರ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಕಲ್ಲು ತೂರಾಟ ನಡೆಸಿ ಕಿಡಿಗೇಡಿಗಳು ಬೈಕ್​ಗೆ ಬೆಂಕಿ ಹಚ್ಚಿದ್ದರು.

ಇದೇ ವೇಳೆ ವಿದ್ಯುತ್​ ಸಂಪರ್ಕ ಕೂಡ ಕಡಿತಗೊಂಡಿತ್ತು.ಘಟನಾ ಸ್ಥಳಕ್ಕೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಎಸ್​ಪಿಯಿಂದ ಐಜಿಪಿ ಮಾಹಿತಿ ಪಡೆದಿದ್ದಾರೆ. ಪಟ್ಟಣದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಹೆಚ್ಚುವರಿಯಾಗಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಕಲ್ಲು ತೂರಾಟದ ವೇಳೆ ಪವರ್​ ಕಟ್ ಕುರಿತು ಪರಿಶೀಲನೆ ಮಾಡಲಾಗುತ್ತಿದೆ. ಎಲ್ಲವೂ ತನಿಖೆ ಹಂತದಲ್ಲಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ಬಳಿಕ ಕೇಂದ್ರ ವಲಯ ಐಜಿಪಿ ಎಂ. ಚಂದ್ರಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -

Related news

error: Content is protected !!