- Advertisement -
- Advertisement -
ಬೆಳ್ತಂಗಡಿ: ತಮಿಳು ನಟ ವಿಶಾಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದೇವರ ದರ್ಶನ ಪಡೆದರು.
ತಮಿಳಿನ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿರುವ ನಟ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ,ಮಂಜುನಾಥ ಸ್ವಾಮಿ ಆಶೀರ್ವಾದ ಪಡೆದಿದ್ದಾರೆ. ಜೊತೆಗೆ ವಿಶಾಲ್ ಜೊತೆ ಸ್ನೇಹಿತರು ಕೂಡ ಇದ್ದರು.
ನಂತರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದು, ಆಶ್ಲೇಷ ಬಲಿ ಪೂಜೆ ನೆರವೇರಿಸಿದ್ದಾರೆ. ಶನಿವಾರ ಮುಂಜಾನೆ ಕುಕ್ಕೆ ಸುಬ್ರಹ್ಮಣ್ಯಸನ್ನಿಧಿಯಲ್ಲಿ ನಟ ವಿಶಾಲ್, ಆಶ್ಲೇಷ ಬಲಿ ಪೂಜೆ ನೆರವೇರಿಸಿದ್ದಾರೆ. ಪಂಚೆ, ಶಲ್ಯ ಧರಿಸಿದ್ದ ಅವರು ಪೂಜಾ ಕೈಂಕರ್ಯದಲ್ಲಿ ಭಾಗಿಯಾದರು.
ಈ ವೇಳೆ ನೆಚ್ಚಿನ ನಟನನ್ನು ನೋಡಿ ಫ್ಯಾನ್ಸ್ ಸೆಲ್ಫಿಗಾಗಿ ಮುಗಿಬಿದ್ದಿದ್ದರು. ವಿಶಾಲ್ ‘ಲಾಠಿ’ ಚಿತ್ರದ ಮೂಲಕ ಖಡಕ್ ಆಫೀಸರ್ ಆಗಿ ತೆರೆಗೆ ಅಪ್ಪಳಿಸುತ್ತಿದ್ದಾರೆ. ಹೊಸ ಸಿನಿಮಾಗಾಗಿ ನಿರ್ದೇಶನಕ್ಕೂ ಅವರು ಕೈ ಹಾಕಿದ್ದಾರೆ.
- Advertisement -