- Advertisement -
- Advertisement -
ಶ್ರೀ ವಿಷ್ಣುಮೂರ್ತಿ ಯುವಕ ವೃಂದ (ರಿ) ವಿಷ್ಣುನಗರ ಕುಂಡಡ್ಕ, ವಿಷ್ಣುಮೂರ್ತಿ ದೇವಸ್ಥಾನ, ವಿಷ್ಣುಮೂರ್ತಿ ಯುವಕ ವೃಂದ, ಇಡ್ಕಿದು ಗ್ರಾಮ ಪಂಚಾಯತ್, ಇಡ್ಕಿದು ಸೇವಾ ಸಹಕಾರಿ ಸಂಘದ ಸಹಯೋಗದೊಂದಿಗೆ ನಾಗೇಶ್ ಪಾದೆ ಇವರ ಗದ್ದೆಯ ನೇಜಿ ನೆಡುವ ಕಾರ್ಯಕ್ರಮ ಇಂದು ನಡೆಯಿತು.
ಈ ಕಾರ್ಯಕ್ರಮದಲ್ಲಿ ಇಡ್ಕಿದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಗೋಕುಲ್ ದಾಸ್ ಭಕ್ತ, ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ ಶೆಟ್ಟಿ ಬೀಡಿನಮಜಲು, ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು, ಇಡ್ಕಿದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಧೀರ್ ಕುಮಾರ್, ಉಪಾಧ್ಯಕ್ಷರಾದ ಯಶೋದ ಕಂಪ. ಚಿದಾನಂದ ಗೌಡ ಪೆಲತ್ತಿಂಜ, ನಾಗೇಶ್ ಪಾದೆ ಹಾಗೂ ಇಡ್ಕಿದು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಯುವಕವೃಂದದ ಸದಸ್ಯರು, ಊರಿನ ಮಹಿಳೆಯರು ಕೈ ಜೋಡಿಸಿದರು. ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಯುವಕ ವೃಂದದ ವತಿಯಿಂದ ಧನ್ಯವಾದಗಳು.
- Advertisement -