Saturday, June 28, 2025
spot_imgspot_img
spot_imgspot_img

ಸಚಿವೆ ಶಶಿಕಲಾ ಜೊಲ್ಲೆ ಮನೆ ಮುಂದೆ ರೌಡಿಶೀಟರ್‌ ಮೇಲೆ ಕಾರು ಹತ್ತಿಸಿ ಕೊಲೆ ಯತ್ನ..!!

- Advertisement -
- Advertisement -
vtv vitla

ಬೆಂಗಳೂರು: ಸಚಿವೆ ಶಶಿಕಲಾ ಜೊಲ್ಲೆ ಅವರ ಮನೆಯ ಮುಂದೆಯೇ ಕೊಲೆಯ ಯತ್ನ ನಡೆದಿದ್ದು ಸಿಟಿ ಮಂದಿ ಬೆಚ್ಚಿಬಿದ್ದಿದ್ದಾರೆ. ಕಿಡಿಗೇಡಿಗಳು ತಮ್ಮ ಸ್ನೇಹಿನ ಮೇಲೆಯೇ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ. ಮೂರ್ನಾಲ್ಕು ಬಾರಿ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾರೆ. ಸದ್ಯ ಗಾಯಾಳು ರೌಡಿಶೀಟರ್​ನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ರೌಡಿಶೀಟರ್ ಗಗನ್ ಶರ್ಮಾ ಎಂಬಾತನ ಮೇಲೆ ಸುನೀಲ್ ಕುಮಾರ್, ಅರುಣ್, ಕೃಷ್ಣ ಕೃತ್ಯ ಎಸಗಿ ವಿಕೃತಿ ಮೆರೆದಿದ್ದಾರೆ. ರೌಡಿಶೀಟರ್ ಗಗನ್ ಮತ್ತು ಉಳಿದ ಆರೋಪಿಗಳೆಲ್ಲರೂ ಸ್ನೇಹಿತರು. ಬಿಬಿಎಂಪಿ ಟ್ಯಾಕ್ಸ್ ಕಲೆಕ್ಟರ್ ಆಗಿರುವ ಸುನೀಲ್ ಕುಮಾರ್ ಹಾಗೂ ಗಗನ್ ನಡುವೆ ಆಸ್ತಿ ವಿಚಾರಕ್ಕಾಗಿ ಮನಸ್ತಾಪವಾಗಿತ್ತು. ಹೀಗಾಗಿ ಸುನೀಲ್‌ ಮಾತನಾಡಬೇಕು ಎಂದು ಮಾರ್ಚ್ 20 ರಂದು ರಾತ್ರಿ 10 ಗಂಟೆಗೆ ಗಗನ್​ಗೆ ಕಾಲ್ ಮಾಡಿ ಫ್ರೇಜರ್ ಟೌನ್​ಗೆ ಕರೆಸಿಕೊಂಡಿದ್ದ. ಬಳಿಕ ಅಲ್ಲಿಂದ ಕಾರಿನಲ್ಲಿ ಕೂರಿಸಿಕೊಂಡು ಸಿಟಿ ರೌಂಡ್ಸ್ ಹೊಡೆದು ಮಾರ್ಚ್ 21 ರ ಬೆಳಗ್ಗೆ ಜಯಮಹಲ್ ರಸ್ತೆ ಬಳಿ ಬಂದು ಕಾರು ನಿಲ್ಲಿಸಿದ್ದ. ಕೆಎ ೦3 ಎಂಫ್ 3347 ನಂಬರ್ ನ ಅಸ್ಸೆಂಟಟ್ ಕಾರಿನಲ್ಲಿ ನಾಲ್ವರು ಇದ್ದರು. ನಾಲ್ವರು ಕೂಡ ಒಟ್ಟಿಗೆ ಸಿಟಿ ರೌಂಡ್ಸ್ ಹೊಡೆದಿದ್ದು, ಈ ವೇಳೆ ಗಲಾಟೆ ನಡೆದಿದೆ. ಸುನೀಲ್ ಸೇರಿ ಮೂವರು ಗಗನ್ ಮೇಲೆ ಹಲ್ಲೆ ನಡೆಸಿದ್ದಾರೆ. ದೊಣ್ಣೆ, ಕೈಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಕೆಳಗೆ ತಳ್ಳಿ ಮೂರ್ನಾಲ್ಕು ಬಾರಿ ಕಾರು ಹತ್ತಿಸಿ ಬಳಿಕ ಎಸ್ಕೇಪ್ ಆಗಿದ್ದಾರೆ. ಇದನ್ನು ಕಂಡ ಸ್ಥಳೀಯರು ಜೆಸಿ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಗಾಯಾಳು ಗಗನ್​ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆಯಲ್ಲಿ ಗಗನ್ ಕಾಲು, ಪಕ್ಕೆಲುಬು ಮುರಿದಿದೆ. ಕಣ್ಣು, ಮುಖ, ಕೈಗಳಿಗೆ ಗಂಭೀರ ಗಾಯಗಳಾಗಿವೆ. ಘಟನೆ ಸಂಬಂಧ ಜೆಸಿ ನಗರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು ಆರೋಪಿ ಸುನೀಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಇಬ್ಬರಿಗಾಗಿ ಶೋಧ ನಡೆಯುತ್ತಿದೆ.

- Advertisement -

Related news

error: Content is protected !!