- Advertisement -
- Advertisement -
ತುಮಕೂರು: ಪಠ್ಯ ಪುಸ್ತಕದ ಕೇಸರಿಕರಣ, ಕುವೆಂಪುಗೆ ಅವಮಾನ ಖಂಡಿಸಿ ತಿಪಟೂರು ನಗರದಲ್ಲಿರುವ ಶಿಕ್ಷಣ ಸಚಿವ ನಾಗೇಶ್ರ ಮನೆಗೆ NSUI ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ನೇತೃತ್ವದಲ್ಲಿ ವಿದ್ಯಾರ್ಥಿಗಳ ಸಂಘ ಮುತ್ತಿಗೆ ಹಾಕಿದೆ.
ಈ ಬಗ್ಗೆ ತುರ್ತುಗೋಷ್ಠಿ ನಡೆಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಪ್ರತಿಭಟಿಸಿದ ಕಾಂಗ್ರೆಸ್ನ 15 ಕಾರ್ಯಕರ್ತರು ಮತ್ತು 2 ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ರೀತಿಯ ಗುಂಡಾ ವರ್ತನೆ ನಮ್ಮಲ್ಲಿ ನಡೆಯಲ್ಲ. ಬೆಂಗಳೂರಿಂದ ಐವರು, ದಾವಣಗೆರೆಯಿಂದ ಮೂವರು, ಹಾಸನದಿಂದ ಒಬ್ಬರು, ತುಮಕೂರಿನಿಂದ ಒಬ್ಬರು ಎಸ್ಎಸ್ಯುಐ ಮುಖಂಡರು ಪ್ರೀ ಪ್ಲಾನ್ ಮಾಡಿಕೊಂಡು ಬಂದಿದ್ದಾರೆ. ಅವರಿಗೆಲ್ಲ ಈಗ ಪೊಲೀಸರು ಕಾನೂನಿನ ಪಾಠ ಮಾಡ್ತಾರೆ. ಇದು ಕಾಂಗ್ರೆಸ್ ಮುಖಂಡರ ಕೈವಾಡ ಎಂದು ಹೇಳಿದ್ದಾರೆ.
- Advertisement -