Thursday, April 25, 2024
spot_imgspot_img
spot_imgspot_img

ಸನ್ಯಾಸತ್ವ ತ್ಯಜಿಸಿ ಮಹಿಳೆ ಜೊತೆ ಪರಾರಿಯಾದ ಸ್ವಾಮೀಜಿ..? ಪತ್ರ ಬರೆದಿಟ್ಟು ಎಸ್ಕೇಪ್‌

- Advertisement -G L Acharya panikkar
- Advertisement -

ರಾಮನಗರ : ಪ್ರೀತಿಸಿದ ಮಹಿಳೆ ಜೊತೆ ಮಠ ಬಿಟ್ಟು ಎಸ್ಕೇಪ್‌ ಆದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರಿನಲ್ಲಿ ನಡೆದಿದೆ.

ಸೋಲೂರಿನ ಗದ್ದುಗೆ ಮಠದ ಶಿವಮಹಂತಸ್ವಾಮಿ ಹರೀಶ್‌ ಪರಾರಿಯಾಗಿದ್ದಾರೆ. ಕಳೆದ ಎರಡು ವರ್ಷದ ಹಿಂದೆ ಪಟ್ಟಾಭಿಷೇಕ ಸ್ವೀಕರಿಸಿದ್ದ ಸ್ವಾಮೀಜಿ.

ಹರೀಶ್ ಅಂತ ಇವರು ಮೂಲ ಹೆಸರಾಗಿದ್ದು, ಸ್ವಾಮೀಜಿಯಾದ ಮೇಲೆ ಶಿವಮಹಂತ ಸ್ವಾಮೀಜಿ ಅಂತ ಹೆಸರು ನೀಡಲಾಗಿತ್ತು. ಕಳೆದ ಎರಡು ವರ್ಷಗಳ ಹಿಂದಷ್ಟೇ ಮಠದ ಪೀಠಾಧಿಪತಿಯಾಗಿ ನೇಮಕಗೊಂಡಿದ್ದರು. ಇದೀಗ ಇವರು ಮದುವೆಯಾಗಿ ಒಂದೂವರೆ ತಿಂಗಳಾಗಿದ್ದ ಯುವತಿ ಒಬ್ಬಳ ಜೊತೆಗೆ ಎಸ್ಕೇಪ್ ಆಗಿದ್ದಾರೆ ಎಂಬ ವದಂತಿ ಹಬ್ಬಿದೆ. ಇನ್ನು ಸ್ವಾಮೀಜಿ ಮಠದಿಂದ ತೆರಳುವ ಮುನ್ನ ಪತ್ರವೊಂದನ್ನು ಬರೆದಿದ್ದಾರೆ.

ಸ್ವಾಮೀಜಿ ಬರೆದ ಪತ್ರದಲ್ಲಿ ಏನಿದೆ?

ನಾನು ನನ್ನ ಸ್ವಾಮೀಜಿ ಜೀವನ ತ್ಯಜಿಸುತ್ತಿದ್ದೇನೆ. ಕಾರಣ ನನ್ನ ಜೀವನದಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಈ ಕಾರಣಕ್ಕಾಗಿ ನಾನು ಇದನ್ನೆಲ್ಲಾ ಬಿಟ್ಟು ದೂರ ಹೋಗುತ್ತಿದ್ದೇನೆ. ನನಗೆ ಈ ಜೀವನ ಜಿಗುಪ್ಸೆ ಉಂಟು ಮಾಡಿದೆ. ಈ ಕಾರಣ ನಿಮಗೆಲ್ಲ ಗೊತ್ತಿದೆ ಅಂತ ಭಾವಿಸುತ್ತೇನೆ. ದಯವಿಟ್ಟು ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ. ನಾನು ಕಾವಿ ಬಟ್ಟೆಯನ್ನು ತ್ಯಜಿಸಿದ ಮೇಲೆ ಮತ್ತೆಂದೂ ತೊಡುವುದಿಲ್ಲ. ಹಾಗೇನಾದರೂ ನನ್ನನ್ನು ಹುಡುಕುವ ಪ್ರಯತ್ನ ಮಾಡಿದರೆ ನನ್ನ ಹೆಣವನ್ನು ನೀವು ನೋಡುತ್ತೀರಿ ಅಂತ ಪತ್ರದಲ್ಲಿ ಸ್ವಾಮೀಜಿ ಎಚ್ಚರಿಸಿದ್ದಾರೆ.

ಈ ಹಿಂದೆ ಯುವತಿಯನ್ನು ಪ್ರೀತಿಸುತ್ತಿದ್ದ ಸ್ವಾಮೀಜಿ

ಈ ಹಿಂದೆ ಇದೇ ಸ್ವಾಮೀಜಿ ಬೇರೆ ಮಠದಲ್ಲಿರುವಾಗ ಯುವತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದರು ಎನ್ನಲಾಗಿದೆ. ಆಕೆಗೆ ಕಳೆದ ಒಂದೂವರೆ ತಿಂಗಳ ಹಿಂದೆ ಮದುವೆಯಾಗಿತ್ತು ಅಂತ ಹೇಳಲಾಗುತ್ತಿದೆ. ಅದೇ ಹುಡುಗಿ ಜೊತೆ ಶಿವಮಹಂತಸ್ವಾಮಿ ಅಲಿಯಾಸ್ ಹರೀಶ್ ಪರಾರಿಯಾಗಿರುವ ಶಂಕೆ ಇದೆ. ಇದೀಗ ಕುದೂರು ಠಾಣೆಯಲ್ಲಿ ಸ್ವಾಮೀಜಿ ಮಿಸ್ಸಿಂಗ್ ಕೇಸ್ ದಾಖಲಾಗಿದೆ.

- Advertisement -

Related news

error: Content is protected !!