Saturday, April 20, 2024
spot_imgspot_img
spot_imgspot_img

ಸರಣಿ ಅಪಘಾತ ; ಇಬ್ಬರು ಮೃತ್ಯು, ಓರ್ವ ಗಂಭೀರ

- Advertisement -G L Acharya panikkar
- Advertisement -

ಕಾರೊಂದು ಟ್ರ್ಯಾಕ್ಟರ್ ಹಾಗೂ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿ ಬಳಿ ನಡೆದಿದೆ.

ಬಿಲ್ಲಹಳ್ಳಿ ಮಂಜುನಾಥ (24) ಪಾಂಡೊಮಟ್ಟಿ ಅಮೃತ್ (23) ಸಾವನ್ನಪ್ಪಿದ ಯುವಕರು. ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದು ದಾವಣಗೆರೆ ಎಸ್ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯುವಕರು ದಾವಣಗೆರೆಯಲ್ಲಿ ಗೆಳೆಯರೊಬ್ಬರ ಮದುವೆ ಮುಗಿಸಿಕೊಂಡ ಸ್ವ ಗ್ರಾಮ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ. ಕಾರು ಮೊದಲು ಎದುರಿನಿಂದ ಬರುತ್ತಿದ್ದ ಟ್ಯ್ರಾಕ್ಟರ್ ಗೆ ಹೊಡೆದು ನಂತರ ಲಾರಿಗೆ ಬಡಿದಿದೆ.

ಟ್ರ್ಯಾಕ್ಟರ್ ನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!