- Advertisement -
- Advertisement -
ಉಡುಪಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ.) ಮಂಗಳೂರು ಹಾಗೂ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಯಶ್ ಪಾಲ್ ಸುವರ್ಣ ರವರು ಸಹಕಾರ ಕ್ಷೇತ್ರದ ಅತ್ಯುನ್ನತ ಗೌರವ 2022 ನೇ ಸಾಲಿನ “ಸಹಕಾರ ರತ್ನ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನ. 18 ರಂದು ಶುಕ್ರವಾರ ಕರಾವಳಿ ಉತ್ಸವ ಮೈದಾನದ ಮಂಗಳೂರು (ಮಂಗಳ ಕ್ರೀಡಾಂಗಣದ ಹತ್ತಿರ) ಇಲ್ಲಿ ನಡೆಯಲಿರುವ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯಶ್ ಪಾಲ್ ಎ. ಸುವರ್ಣರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಸಹಕಾರ ಕ್ಷೇತ್ರದ ವಿಶಿಷ್ಟ ಸಾಧನೆಗಾಗಿ ಸಹಕಾರ ರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಯಶ್ ಪಾಲ್ ಸುವರ್ಣರವರಿಗೆ ಅಭಿಮಾನಿಗಳು, ಹಿತೈಷಿಗಳಿಂದ ಹೃತ್ಪೂರ್ವಕ ಅಭಿನಂದನೆಗಳು.
- Advertisement -