- Advertisement -
- Advertisement -
ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊರಪೇಟೆ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿ ಮುಹಮ್ಮದ್ ಅಝರ್(28) ಎಂದು ಗುರುತಿಸಲಾಗಿದೆ.
ಮುಬಾರಕ್, ಬಾಬು, ಪ್ರದೀಪ್ ಎಂಬ ಮೂವರು ಆರೋಪಿಗಳನ್ನು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹಣದ ವ್ಯವಹಾರ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಚಿತ್ರದುರ್ಗ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
- Advertisement -