Tuesday, April 30, 2024
spot_imgspot_img
spot_imgspot_img

ಸಿಎಂ ಬೊಮ್ಮಾಯಿಯ ಬೆಂಗಾವಲು ವಾಹನ ಪಲ್ಟಿ; ಹಲವರಿಗೆ ಗಾಯ

- Advertisement -G L Acharya panikkar
- Advertisement -

ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಬೆಂಗಾವಲು ಪೋಲಿಸ್ ವಾಹನಕ್ಕೆ ಬೈಕ್ ಅಡ್ಡ ಬಂದ ಹಿನ್ನೆಲೆಯಲ್ಲಿ ಬೆಂಗವಾಲು ವಾಹನ, ನಡೆದುಕೊಂಡು ಹೋಗುತ್ತಿದ್ದ ತಾಯಿ , ಮಗನಿಗೆ ಡಿಕ್ಕಿಯಾಗಿದ್ದು ಇಬ್ಬರ ಸ್ಥಿತಿಯೂ ಗಂಭೀರವಾಗಿದೆ. ಘಟನೆಯಿಂದ ಕೆಲವು ಪೊಲೀಸರು ಗಾಯಗೊಂಡಿದ್ದಾರೆ.

89 ವರ್ಷಗಳ ಬಳಿಕ ಭರ್ತಿಯಾಗಿ ಕೋಡಿ ಬಿದ್ದಿದ್ದ ವಾಣಿವಿಲಾಸ ಸಾಗರ ಜಲಾಶಯಕ್ಕೆ ಇಂದು ಸಿಎಂ ಬೊಮ್ಮಾಯಿ ಅವರು ಬಾಗಿನ ಅರ್ಪಿಸಿದರು. ಕಾರ್ಯಕ್ರಮ ಮುಗಿದ ಬಳಿಕ ಸಿಎಂ ಬೊಮ್ಮಾಯಿ ಅವರು ಚಲಿಸುತ್ತಿದ್ದ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿದೆ. ವಾಣಿ ವಿಲಾಸ ಡ್ಯಾಂನಿಂದ ಹಿರಿಯೂರು ಪಟ್ಟಣದ ನೆಹರು ಮೈದಾನಕ್ಕೆ ಬರುವ ವೇಳೆ ಈ ಘಟನೆ ನಡೆದಿದೆ.

ಹಿರಿಯೂರು ಕಚೇರಿ ಸಮೀಪದ ಅನಿಲ್ ಲಾಡ್ಜ್ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಬೈಕ್ ಅಡ್ಡ ಬಂದ ಪರಿಣಾಮ ಅದನ್ನು ತಪ್ಪಿಸಲು ಹೋಗಿ ವಾಹನ ಪಲ್ಟಿಯಾಗಿದೆ. ವಾಹನ ಪಲ್ಟಿಯಾದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿಪಿಐ ರಮಾಕಾಂತ್ ಸೇರಿದಂತೆ ಹಲವರು ವಾಹನದಲ್ಲಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

vtv vitla
- Advertisement -

Related news

error: Content is protected !!