Friday, June 27, 2025
spot_imgspot_img
spot_imgspot_img

ಸಿಎಂ ಯಡಿಯೂರಪ್ಪ ರಾಜೀನಾಮೆ ಘೋಷಣೆ..! ವಿದಾಯ ಭಾಷಣ ಮಾಡಿದ ರಾಜಾಹುಲಿ

- Advertisement -
- Advertisement -

ಬೆಂಗಳೂರು: ಸರ್ಕಾರದ ಎರಡು ವರ್ಷಗಳ ಸಾಧನಾ ಕಾರ್ಯಕ್ರಮದಲ್ಲಿ ಬಿಎಸ್‌ವೈ ರಾಜೀನಾಮೆ ಘೋಷಣೆ ಮಾಡಿದ್ದಾರೆ. ರಾಜಭವನಕ್ಕೆ ತರೆಳಿ ರಾಜೀನಾಮೆ ಸಲ್ಲಿಸುವೆ ಎಂದಿದ್ದಾರೆ. ಮೋದಿ ನನ್ನನ್ನು ಸಿಎಂ ಮಾಡಿದ್ರು. ಖುಷಿಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಭಾವುಕರಾಗಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದಕ್ಕೆ ಶಿಕಾರಿಪುರದ ಜನತೆ ನನ್ನನ್ನು ಏಳು ಭಾರಿ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಕರ್ನಾಟಕದ ಜನತೆ ನನ್ನನ್ನು ಕೈಬಿಡಲಿಲ್ಲ. ಲಕ್ಷಾಂತರ ಬಿಜೆಪಿ ಕಾರ್ಯಕರ್ತರು ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣ ಎಂದು ಹೇಳಿದರು.

ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಅಧಿಕಾರಕ್ಕೆ ಅವಕಾಶ ಕೊಡಲ್ಲ ಆದರೆ ಜೆ.ಪಿ. ನಡ್ಡಾ ಅವರು ನನಗೆ 2 ವರ್ಷ ಮುಖ್ಯಮಂತ್ರಿ ಆಗಲು ಅವಕಾಶ ಮಾಡಿಕೊಟ್ಟರು. ಪ್ರಧಾನಿ ಮೋದಿ, ಅಮಿತ್ ಶಾ ಜೋಡಿ ಮತ್ತೊಮ್ಮೆ ಲೋಕಸಭೆ ಚುನಾವಣೆಯಲ್ಲಿ ಗೆದ್ದು ದೇಶವನ್ನು ಮುನ್ನಡೆಸುವ ಅವಕಾಶ ಸಿಗಬೇಕು ಎಂದರು.

- Advertisement -

Related news

error: Content is protected !!