Friday, April 26, 2024
spot_imgspot_img
spot_imgspot_img

ಸಿಲಿಂಡರ್ ಸ್ಪೋಟಗೊಂಡು ಇಬ್ಬರಿಗೆ ಗಾಯ; ಸ್ಪೋಟದ ತೀವ್ರತೆಗೆ ಹಾರಿದ ಮನೆಯ ಹೆಂಚುಗಳು

- Advertisement -G L Acharya panikkar
- Advertisement -

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಬೀರೂರಿನ ಯರೇಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರನ್ನು ಮರುಳಸಿದ್ದಪ್ಪ, ಹಾಗೂ ಚೈತನ್ಯ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಛಾವಣಿ ಹೆಂಚುಗಳು ಹಾರಿದೆ.

ಮರುಳಸಿದ್ದಪ್ಪ ಅಡುಗೆ ಮಾಡಲೆಂದು ಗ್ಯಾಸ್‌ ಸ್ಟೌವ್ ಹಚ್ಚಲು ಮುಂದಾದಾಗ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡಿದೆ. ಗಾಬರಿಗೊಂಡು ಹೊರಗೆ ಓಡುವಾಗ ಬಾಗಿಲ ಬಳಿ ಬರುವಷ್ಟರಲ್ಲಿ ಸಿಲಿಂಡರ್ ಸ್ಫೋಟಿಸಿ ಭುಜಕ್ಕೆ ಸುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಜಗುಲಿಯಲ್ಲಿ ಆಟವಾಡುತ್ತಿದ್ದ ಚೈತನ್ಯಾಳ ತಲೆಯ ಮೇಲೆ ಹೆಂಚುಗಳು ಬಿದ್ದು ಆಕೆಗೂ ಕೂಡ ಗಂಭೀರ ಗಾಯಗಳಾಗಿದೆ.

ಘಟನೆ ನಡೆಯುತ್ತಿದ್ದಂತೆ ಅಗ್ನಿ ಶಾಮಕದಳಕ್ಕೆ ಸ್ಥಳೀಯರು ಕರೆ ಮಾಡಿ ತಿಳಿಸಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಬೀರೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ. ಹುಲ್ಲಹಳ್ಳಿ ಪಿಡಿಒ ಮಂಜುನಾಥ್ ಮತ್ತು ಗ್ರಾಪಂ ಸದಸ್ಯ ಎಂ.ಲಕ್ಷ್ಮಣಪ್ಪ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!