- Advertisement -
- Advertisement -
ಬೆಳ್ತಂಗಡಿ: ಈತ ಕೊಕ್ಕಡದ ಆಟೋ ಡ್ರೈವರ್. ಸೌತಡ್ಕಕ್ಕೆ ಬಂದ ಬೆಂಗಳೂರಿನ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೇಮಕ್ಕೆ ತಿರುಗಿ ಮದುವೆ ಕೂಡ ಆಗಿದ್ದು ಈಗ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಕಾರಣವಾಗಿದೆ. ಹಿಂದೂ ಸಂಘಟನೆಗಳು ಇದೊಂದು ಲವ್ ಜಿಹಾದ್ ಷಡ್ಯಂತ್ರ ಎಂದು ಆರೋಪಿಸಿದೆ.
ಕೊಕ್ಕಡದಲ್ಲಿ ಆಟೋ ಓಡಿಸ್ತಿದ್ದ ಮುಸ್ಲಿಂ ಯುವಕ ಸಮೀರ್ (೨೭) ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಬಸಮ್ಮ ರಕ್ಕಸಗಿ(22) ಇದೇ ತಿಂಗಳು ರಿಜಿಸ್ಟಾರ್ ಮದುವೆಯಾಗಿದ್ದಾರೆ. ಇದರ ಪ್ರತಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಬೆಂಗಳೂರಿನ ಬಸಮ್ಮ ಸೌತಡ್ಕ ದೇವಸ್ಥಾನಕ್ಕೆ ಆಗಮಿಸಿದ್ದ ವೇಳೆ ಆಟೋ ಚಾಲಕ ಸಮೀರ್ ನ ಪರಿಚಯವಾಗಿದ್ದು, ನಂತರದ ದಿನಗಳಲ್ಲಿ ಇವರಿಬ್ಬರ ಪರಿಚಯ ಪ್ರೇಮವಾಗಿ, ಮದುವೆಯ ತನಕ ಹೋಗಿದೆ ಎಂಬ ಆರೋಪ ಕೇಳಿಬಂದಿದೆ. ಅನ್ಯಕೋಮಿನ ಯುವಕ ಹಿಂದೂ ಯುವತಿಯ ಜೊತೆ ಪ್ರೀತಿಯ ನಾಟಕವಾಡಿ ಆಕೆಯನ್ನು ವಿವಾಹವಾಗಿ ಮತಾಂತರ ಮಾಡುವ ಮೂಲಕ ಲವ್ ಜಿಹಾದ್ ಕೃತ್ಯವನ್ನೆಸಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Advertisement -